Sunday, January 25, 2026

ಜೆಡಿಎಸ್ ಕಾರ್ಯಕರ್ತರ ಸಭೆ

ಬಂಟ್ವಾಳ : ಜೆಡಿಎಸ್ ಕಾರ್ಯಕರ್ತರ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ರಿಕ್ಷಾಭವನದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ಮೋಹನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಅಮರನಾಥ ಶೆಟ್ಟಿ ಈ ಚುಣಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದ್ದು ಮೈತ್ರಿ ಧರ್ಮ ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಕೇಂದ್ರ ಸರಕಾರದ ವೈಫಲ್ಯ ಹಾಗೂ ರಾಜ್ಯ ಸರಕಾರದ ಸಾಧನೆಯ ಬಗ್ಗೆ ವಿವರಣೆ ನೀಡಿದರು.
ರಾಜ್ಯ ಕಾರ್ಯದರ್ಶಿ ಮಹಮ್ಮದ್ ಶಫಿ ಮಾತನಾಡಿ ಪಕ್ಷ ಸಂಘಟನೆಗೆ ಜಿಲ್ಲಾ ನಾಯಕರು ಕ್ಷೇತ್ರದಲ್ಲಿ ನಿರಂತರ ವಾಗಿ ಸಂಪರ್ಕದಲ್ಲಿರುವಂತೆ ಹಾಗೂ ಪಕ್ಷದ ಕಛೇರಿ ತಕ್ಷಣ ತೆರೆಯಲು ಸಲಹೆ ನೀಡಿದರು.
ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ನಮ್ಮ ಪಕ್ಷವನ್ನು ಹಾಗೂ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಂಡು ಹೋಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರ ಶೀದ್ ಜಿಲ್ಲೆಯ ನಾಯಕರಲ್ಲಿ ಮನವಿ ಮಾಡಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಯುವ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳಾ ಜಿಲ್ಲಾಧ್ಯಕ್ಷ ಸುಮತಿ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀರ್ಣ ಚಂದ್ರ ಜೈನ್, ಹಿರಿಯ ಮುಖಂಡರಾದ ಪಿ.ಎ.ರಹೀಂ , ಮಹಮ್ಮದ್ ಸುವಾಜ್ , ರ ಫೀಕ್ ಕೊಚ್ಚಿ , ಮಹಮ್ಮದ್ ಶಫಿಕ್, ಸುಲೈಮಾನ್ ಅಕ್ಕರಂಗಡಿ, ಹರೀಶ್ ಕೊಟ್ಟಾರಿ, ಇಸಾಕ್ ಕಲ್ಲಡ್ಕ, ಮಹಿಳಾ ಮುಖಂಡರಾದ ಕುಶಲ ಶೆಟ್ಟಿ, ಕೈರುನ್ನಿಸ ಉಪಸ್ಥಿತರಿದ್ದರು. ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಸ್ವಾಗತಿಸಿದರು. ಅಮಾನುಲ್ಲಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...