ಮಂಗಳೂರು: ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅಭಿನವ ಮಂಗಳೂರು ಲೋಕೇಶ್ ಸಂಪಿಗೆ ಬಳಗದ ವಾದ್ಯವೈವಿಧ್ಯದೊಂದಿಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರಂಭಗೊಂಡಿದೆ. 2 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ 1800 ಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಇಲ್ಲಿನ ಮಿನಿ ವಿಧಾನಸೌಧದ ಬಳಿಯ ತಾಲೂಕು ಪಂಚಾಯತ್ನ ನೂತನ ಕಟ್ಟಡದಲ್ಲಿ ಪತ್ರಕರ್ತರ ನೋಂದಣಿ ನಡೆಯುತ್ತಿದೆ. ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಈಗಾಗಲೇ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಮ್ಮೇಳನವು ಪುರಭವನದ ದಿ. ವಡ್ಜಸೆರ್ ರಘುರಾಮ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿದೆ.


