Wednesday, January 28, 2026

ಎಸ್.ಐ.ಪ್ರಸನ್ನ ನೇತ್ರತ್ವದಲ್ಲಿ ಜುಗಾರಿ ಅಡ್ಡೆಗೆ ದಾಳಿ : 15 ಜನರ ಬಂಧನ

ಬಂಟ್ವಾಳ: ಜುಗಾರಿ ಆಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು ಆಟದ ಲ್ಲಿ ನಿರತರಾಗಿದ್ದ 15 ಜನರನ್ನು ಬಂಧಿಸಿ ಆಟಕ್ಕೆ ಬಳಸಲಾಗಿದ್ದ ನಗದು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ತುಂಬೆ ಗ್ರಾಮದ ನೇತ್ರಾವತಿ ನದಿಯ ಬದಿಯಲ್ಲಿ ಆಡುತ್ತಿದ್ಧ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೋಲೀಸರು ಆಟದಲ್ಲಿ ನಿರತರಾಗಿದ್ದ

.ಅಮಿತ ಶೆಟ್ಟಿ, .ರಾಮಚಂದ್ರ,ಸಂತೋಷ್ ಕುಮಾರ್,ಧೀರಜ್,ಸುಜಯ್,.ನಜೀರ್,.ಮೊಹಮದ್ ಮುಸ್ತಾಫಾ,.ಕಿಶೋರ್,ಮಹಮದ್ ಷರೀಫ್,.ನಿತ್ಯಾನಂದ,.ರಮೇಶ್, ನಾಗೇಶ್, .ರೋಷನ್ ವೇಗಸ್,ಹೇಮಚಂದ್ರ,ಮತ್ತು .ಚೇತನ್, ಎಂಬುವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ದಾಳಿಯಲ್ಲಿ ಒಟ್ಟು *38000/-ರೂ* ಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಟಾರ್ಪಲ್, ಚಾರ್ಜ್ ಅಬಲೆ ಬ್ಯಾಟರಿ ಮತ್ತು ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಆ. ಕ್ರ.58/19 ಕಲಂ 87 ಕರ್ನಾಟಕ ಪೊಲೀಸ್ ಕಾಯ್ದೆ 1963 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ಯಲ್ಲಿರುತ್ತದೆ .
ಬಂಟ್ವಾಳ ಎ.ಎಸ್.ಪಿ. ಸೈದುಲು ಅದಾವತ್ ಬಂಟ್ವಾಳ ವೃತ್ತ ನಿರೀಕ್ಷಕ ಶರಣಗೌಡ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಪ್ರೋಬೆಶನರಿ ಪಿ.ಎಸ್.ಐ. ವಿನೋದ್ , ಎಚ್.ಸಿ. ಗಳಾದ ಜನಾರ್ದನ , ಸುರೇಶ್,ಪಿ.ಸಿ.ಗಳಾದ ನಜೀರ್,ಪುನೀತ್,ಬಸವರಾಜ್,ಆದರ್ಶ,ವಿವೇಕ್,ಉಮೇಶ್,ಸುರೇಶ್, ಎಚ್.ಜಿ.ಅಶೋಕ, ರವರು ದಾಳಿಯಲ್ಲಿ ಭಾಗವಹಿಸುತ್ತಾರೆ.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...