Thursday, June 26, 2025

ಜುಲೈ 21 ರೊಳಗೆ ರಾಜ್ಯಾದ್ಯಂತ ಶಾಲೆ ಆರಂಭಿಸಿ, ತಪ್ಪಿದ್ದಲ್ಲಿ ಹೋರಾಟಕ್ಕೆ ಸಿದ್ದ: ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಎಚ್ಚರಿಕೆ

ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸರಕಾರ ಮುಂದಿನ ಜುಲೈ 21 ರೊಳಗಾಗಿ ರಾಜ್ಯಾದ್ಯಂತ ಶಾಲೆಗಳನ್ನು ಪುನಾರಂಭಿಸಬೇಕು, ತಪ್ಪಿದ್ದಲ್ಲಿ ಹೋರಾಟ ಹಮ್ಮಿಕೊಳ್ಳಲು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ತೀರ್ಮಾನಿಸಿದೆ.

ಜಂಟಿ ಸಮಿತಿಯ ತುರ್ತು ಸಭೆ ಅಧ್ಯಕ್ಷ ಪ್ರಕಾಶ್ ಅಂಚನ್ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ದಡ್ಡಲಕಾಡು ಸರಕಾರಿ ಶಾಲೆಯಲ್ಲಿ ನಡೆದಿದ್ದು ಸಮಿತಿ ಈ ನಿರ್ಣಯ ಕೈಗೊಂಡಿದೆ.

ಕೋವಿಡ್ ಅನ್ ಲಾಕ್ ಪ್ರಕ್ರಿಯೆ ಆರಂಭಗೊಂಡಿದ್ದು ಎಲ್ಲ ವಲಯಗಳಲ್ಲಿ ಚಟುವಟಿಕೆಗಳು ಆರಂಭಗೊಂಡಿದೆ. ಆದರೆ ಶಾಲೆಗಳನ್ನು ಪುನಾರಂಭಿಸುವ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಸರಕಾರ ಕೈಗೊಳ್ಳದೇ ಇರುವ ಬಗ್ಗೆ ಸಮಿತಿಗೆ ರಾಜ್ಯದ್ಯಂತ ಹಲವಾರು ಪೋಷಕರು ಅಳಲು ತೋಡಿಕೊಂಡಿರುವ ಹಿನ್ನಲೆಯಲ್ಲಿ ತುರ್ತು ಸಭೆ ನಡೆಸಲಾಗಿದೆ. ಆನ್ ಲೈನ್ ಹಾಗೂ ವಿದ್ಯಾಗಮ ಶಿಕ್ಷಣ ವ್ಯವಸ್ಥೆಗೆ ವಿರೋಧ ವ್ಯಕ್ತಪಡಿಸಿರುವ ಸಮಿತಿ ಶಾಲೆಗಳನ್ನು ಪುನಾರಂಭಿಸಿ ಮುಖಾಮುಖಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು, ಇದೇ ಪರಿಣಾಮಕಾರಿ ಹಾಗೂ ಸುರಕ್ಷಿತ ವಿಧಾನ ಎನ್ನುವ ಅಂಶ ಪೋಷಕರಿಂದಲೂ ಕೇಳಿ ಬಂದಿದ್ದು ಸರಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಸಮಿತಿಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲು ಸಮಿತಿ ತೀರ್ಮಾನಿಸಿದೆ.

ಕಾರ್ಡ್ ಅಭಿಯಾನ: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಡಿಯಿಂದ ಶಾಲೆಯನ್ನು ಪುನಾರಂಭಿಸುವ ಬಗ್ಗೆ ಸರಕಾರದ ಗಮನ ಸೆಳೆಯಲು ಕಾರ್ಡ್ ಅಭಿಯಾನ ಆರಂಭಿಸಲು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ತೀರ್ಮಾನಿಸಿದೆ. ಶೀಘ್ರವೇ ಅಭಿಯಾನ ಆರಂಭಗೊಳ್ಳಲಿದ್ದು ಶಾಲೆ ಪ್ರಾರಂಭಿಸುವ ಬಗ್ಗೆ ಸಹಮತ ವ್ಯಕ್ತಪಡಿಸುವ ಪಾಲಕರು ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಅಧ್ಯಕ್ಷ ಪ್ರಕಾಶ್ ಅಂಚನ್ ಮನವಿ ಮಾಡಿದ್ದಾರೆ.

ಶಾಲೆ ಆರಂಭಿಸುವುದೇ ಸುರಕ್ಷಿತ ಹಾಗೂ ಪರಿಣಾಮಕಾರಿ: ಎಸ್. ಎಲ್. ಭೋಜೆಗೌಡ 

ಆನ್ ಲೈನ್ ಅಥವಾ ವಿದ್ಯಾಗಮ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸುವ ಬದಲು ಶಾಲೆ ಆರಂಭಿಸಿ ಮುಖಾ ಮುಖಿ ಶಿಕ್ಷಣ ಪ್ರಾರಂಭಿಸುವುದೇ ಹೆಚ್ಚು ಸೂಕ್ತ ಎಂದು ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೂರವಾಣಿಯಲ್ಲಿ ಸಂಪರ್ಕಿಸಿದ ವೇಳೆ ಜಂಟಿ ಸಮಿತಿಯ ತೀರ್ಮಾನಕ್ಕೆ ಸಹಮತ ವ್ಯಕ್ತಪಡಿಸಿದ ಅವರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶಾಲೆ ಆರಂಭಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕಾಗಿದೆ. ಸಮಿತಿಯ ಈ ತೀರ್ಮಾನವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಡಿಯಿಂದ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಕೈಗೊಳ್ಳುವ ನಿರ್ಧಾರಗಳಿಗೆ ತನ್ನ ಬೆಂಬಲ ಇರುವುದಾಗಿ ತಿಳಿಸಿದರು.

ಈ ಸಂದರ್ಭ ರಾಜ್ಯ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ಸದಸ್ಯರಾದ ರಾಮಚಂದ್ರ ಪೂಜಾರಿ ಕರೆಂಕಿ, ಪೂವಪ್ಪ ಮೆಂಡನ್, ನವೀನ್ ಸೇಸಗುರಿ, ಅಶ್ವತ್ ಡೆಚ್ಚಾರ್, ಬಾಲಕೃಷ್ಣ ಜಿ., ಮೊದಲಾದವರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...