Monday, February 2, 2026

ಒಂದಿಷ್ಟು ರಿಲ್ಯಾಕ್ಸ್ ತಗೊಳ್ಳಿ-43

ಇಂದು ಎರಡು ವಿಶೇಷ. ಒಂದು ಜಗಜ್ಯೋತಿ ಬಸವಣ್ಣನವರ ಜಯಂತಿ. ಮತ್ತೊಂದು ಯಾವುದೇ ಕಾರ್ಯಕ್ರಮವನ್ನು ಪ್ರಾರಂಭಿಸಬಹುದಾದ ದಿನ ಅಕ್ಷಯ ತೃತೀಯಾ. ಈ ದಿನ ಯಾವುದೇ ಕಾರ್ಯಾರಂಭಕ್ಕೆ ಉತ್ತಮವಾದ ದಿನ. ಯಾರನ್ನೂ ಕೇಳದೆ ಪ್ರಾರಂಭಿಸಬಹುದಾದ ಒಳ್ಳೆಯ ದಿನ. ಹಾಗೆಯೇ ಮುಸ್ಲಿಮ್ ಬಾಂಧವರಿಗೆ ಪವಿತ್ರ ರಂಜಾನ್ ತಿಂಗಳ ಪ್ರಾರಂಭ. ಹಲವಾರು ಕಡೆ ಸುಗ್ಗಿಹಬ್ಬ. ಮದುವೆ, ಗೃಹಪ್ರವೇಶ, ಮಗುವಿನ ನಾಮಕರಣ, ಸೀಮಂತ, ಅಂಗಡಿ ಪ್ರಾರಂಭ, ಕಟ್ಟಡ ಉದ್ಘಾಟನೆ ಇವೆಲ್ಲ ಮಾಮೂಲಿ ಇದ್ದದ್ದೇ. ನೀವು ಹೊರಟು ರೆಡಿಯಾಗಲು ಮಾತ್ರ ಬಾಕಿ.
ದಿನಾಚರಣೆಗಳಾದ ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ, ಗೃಹ ಪ್ರವೇಶದ ವಾರ್ಷಿಕೋತ್ಸವ, ಪೂಜೆ ಹೀಗೆ ದಿನಾಚರಣೆಗಳು, ಕಾರ್ಯಕ್ರಮಗಳು ಒಂದರ ಹಿಂದೊಂದು ಬರುತ್ತವೆ. ಬಂದ ಆಚರಣೆಗಳನ್ನು ಇತರರಿಗೆ ತೋರಿಸಲಿಕ್ಕಾಗಿ, ಆಡಂಬರಕ್ಕಾಗಿ ಅಲ್ಲ, ಬದಲಾಗಿ ನಮ್ಮ ಆತ್ಮ ಸಂತೋಷಕ್ಕಾಗಿ, ಸರಳವಾಗಿ ನಾವೇ ನಮ್ಮ ಹಾಸಿಗೆ ಇದ್ದಷ್ಟು ಕಾಲು ಚಾಚುವಂತೆ ಆಚರಿಸಿಕೊಳ್ಳೋಣ. ಆಡಂಬರ ಮಾಡಿ ಗುಂಡಿಗೆ ಬೀಳದಿರೋಣ. ನೀವೇನಂತೀರಿ?

@ಪ್ರೇಮ್@

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...