Friday, January 30, 2026

ಒಂದಿಷ್ಟು ರಿಲ್ಯಾಕ್ಸ್ ತಗೊಳ್ಳಿ-49

ಮಳೆಗಾಲ. ಚಟ್ನಿಪುಡಿ, ಉಪ್ಪಿನಕಾಯಿ, ಹಪ್ಪಳ, ಹೋಳುಗಳು, ಸೆಂಡಿಗೆ ಮಾಡಿಡಲು ಯಾರಿಗಿದೆ ಸಮಯ? ರೆಡಿ ಮಾಡಲು, ಬೇಯಿಸಲು,ಒಣಗಿಸಲು, ಕಾಯಿಸಲು ಸಮಯ ಹೇಗಿಲ್ಲವೋ ಹಾಗೆ ಕುಳಿತು ತಿನ್ನಲಿಕ್ಕೂ ಸಮಯವಿಲ್ಲ ಈಗ! ಎಲ್ಲರೂ ದುಡಿಯುವವರೇ, ಎಲ್ಲರೂ ಶ್ರೀಮಂತರೇ, ಆದರೆ ಹೃದಯದಲ್ಲಲ್ಲ! ಸಹಾಯಕ್ಕೆ ಯಾರೂ ಬರಲಾರರು! ಜನರಿಗೆ ಫೋನ್ ಮಾಡಿದರೆ ಮಾತನಾಡಲೂ ಸಮಯವಿಲ್ಲ, ಸಾಮಾಜಿಕ ಜಾಲ ತಾಣಗಳ ಹೊರತಾಗಿ!
ಇಂಥ ಯುಗದಲ್ಲಿ ಫಾಸ್ಟ್ ಲೈಫ್, ಫಾಸ್ಟ್ ಫುಡ್, ರೆಡಿಮೇಡ್ ಊಟ ನಮ್ಮ ಬದುಕಿನಲ್ಲಿ ಹಾಸು ಹೊಕ್ಕಾಗಿದೆ! ಹಾಗಿರುವಾಗ ಜೊತೆಜೊತೆಗೇ ರೋಗಗಳೂ ಕೂಡಾ. ದುಬಾರಿ ಚಿಕಿತ್ಸೆ! ರೋಗಗಳು ಬಂದ ಮೇಲೆ ಮಾಡುವ ಪರಿಹಾರಕ್ಕಿಂತ ರೋಗಗಳು ಬರದಂತೆ ತಡೆಯುವುದು ಮೇಲಲ್ಲವೇ?
ಅದಕ್ಕಾಗಿ ಉತ್ತಮ ಆರೋಗ್ಯ ನಿಯಮಗಳ ಪಾಲನೆಯನ್ನು ನಾವೇ ಮಾಡಿಕೊಳ್ಳಬೇಕು. ಕಂಡ ಕಂಡಲ್ಲಿ ಸಿಕ್ಕಿದ್ದನ್ನು ತಿಂದು ಹೊಟ್ಟೆಯನ್ನು ಕಸದ ಡಬ್ಬಿಯನ್ನಾಗಿ ಮಾಡದೆ, ಸರಿಯಾದ ಸಮಯಕ್ಕೆ ಬೇಕಾದಷ್ಟೆ ತಿಂದು ಆರೋಗ್ಯ ಬಿಗಡಾಯಿಸದೆ ಇರಿಸಬೇಕಾಗಿದೆ.
ನಿಮ್ಮ ಆರೋಗ್ಯ ಕೆಟ್ಟರೆ ನಿಮಗೆ ನೋವು ಮಾತ್ರ, ಕಷ್ಟ ನಿಮ್ಮನ್ನು ಅವಲಂಬಿಸಿ ಬದುಕುತ್ತಿರುವವರಿಗೆ ಎಂಬುದು ನೆನಪಿರಲಿ. ನಾವು ಇತರರಿಗೆ ಭಾರವಾಗಿ ಬದುಕುವಂತಾಗಬಾರದು. ಅದಕ್ಕಾಗಿ ಕುಡಿತ, ಹೊಗೆಸೊಪ್ಪು, ಸಿಗರೇಟು, ಬೀಡಿ ಮೊದಲಾದ ತಂಬಾಕು ಉತ್ಪನ್ನ ಹಾಗೂ ಅಮಲು ಪದಾರ್ಥಗಳ ಬಳಕೆ ನಿಲ್ಲಿಸುವುದಲ್ಲದೆ, ಮನೆ ಮನಗಳನ್ನೂ ಸ್ವಚ್ಛವಾಗಿರಿಸಿಕೊಳ್ಳಬೇಕು.
ಮಳೆ ನೀರಿಗೆ ಕಾಲುಗಳ ಸ್ವಚ್ಛತೆ ಅತ್ಯವಶ್ಯಕ. ನಿಂತ ನೀರನ್ನು ತುಳಿದಾಗ ಅದರಲ್ಲಿನ ಫಂಗಸ್ ಕಾಲಿಗೆ ಅಂಟಿ, ತುರಿಕೆ, ನವೆ ಉಂಟಾಗುತ್ತದೆ. ಕಾಡು, ಗುಡ್ಡ, ತೋಟಗಳಲ್ಲಿ ನಡೆಯುವಾಗ ಜಿಗಣೆಗಳು ಅಂಟಿಕೊಂಡು ತುಂಬಾ ರಕ್ತ ಹೀರಿ ಬಳಿಕ ಬಿದ್ದು ಹೋಗುತ್ತವೆ. ಬಳಿಕ ನಮ್ಮ ಕಾಲು ಕಡಿತ ಪ್ರಾರಂಭವಾಗಿ ಕಡಿಮೆಯಾಗುವುದೇ ಇಲ್ಲ. ಇದನ್ನೆಲ್ಲ ತಡೆಯುವಂತಾಗಬೇಕು.
ಶೂ ಧರಿಸಬೇಕು.
ಜಾಗರೂಕರಾಗಿರಿ. ನಿಮ್ಮ ಕೈಕಾಲುಗಳ ಬಗ್ಗೆ. ಮುಖಕ್ಕೆ ಮಾತ್ರ ಮೇಕಪ್ ಮಾಡುವುದಲ್ಲ. ನೀವೇನಂತೀರಿ?

@ಪ್ರೇಮ್@

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...