Wednesday, January 28, 2026

ಕಳ್ಳತನಕ್ಕೆ ಸಂಚು ಆರೋಪ: ಮಾಣಿಯಲ್ಲಿ ಪೊಲೀಸ್ ಔಟ್ ಪೋಸ್ಟ್ ಗೆ ಒತ್ತಾಯ

ಬಂಟ್ವಾಳ: ಕೊರೋನ ಸೋಂಕು ಕಡಿವಾಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಈ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಅನುಮಾನಾಸ್ಪದವಾಗಿ ಅಕ್ಟಿವಾ ಸ್ಕೂಟರ್ ನಲ್ಲಿ ತಿರುಗಾಡಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಘಟನೆ ನಿನ್ನೆ ರಾತ್ರಿ ವೇಳೆ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಕಾಪಿಕಾಡುವಿನಲ್ಲಿ ನಡೆದಿದೆ.

ವಿಟ್ಲ ಪೋಲೀಸ್ ಠಾಣೆಯ ಸರಹದ್ದಿನಲ್ಲಿ ಬರುವ ಮಾಣಿಯಲ್ಲಿ ಪೋಲೀಸ್ ಹೊರಠಾಣೆ ನಿರ್ಮಾಣ ಮಾಡಲು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ಎರಡು ಹೆದ್ದಾರಿಗಳು ಸೇರುವ ಮಾಣಿ ಜಂಕ್ಷನ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳ ಕಾಕರ ಕಾಟ ಜಾಸ್ತಿ ಆಗಿದೆ. ಗೂಡಂಗಡಿಗಳಲ್ಲಿ ಸಣ್ಣ ಪುಟ್ಟ ಕಳ್ಳತನ, ವಂಚನೆ ಪ್ರಕರಣ ಈ ಹಿಂದಿನಿಂದಲೂ ಆಗುತ್ತಿರುತ್ತದೆ. ಆದರೆ ಸಣ್ಣ ಪುಟ್ಟ ಕಳ್ಳತನ ಪೋಲೀಸ್ ಠಾಣೆಯ ಮೆಟ್ಟಲು ಹತ್ತುವುದೇ ಇಲ್ಲ. ಈ ಒಂದು ಸಾರ್ವಜನಿಕರ ದೌರ್ಬಲ್ಯವೇ ಕಳ್ಳಕಾಕರಿಗೆ ವರದಾನವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಮುಂದೆ ಈ ಬಗ್ಗೆ ಪೋಲೀಸರು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂಬುದು ಸದ್ಯದ ಕುತೂಹಲ. ಆದರೂ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ ಎನ್ನಲಾಗಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ಮಾಣಿಯಲ್ಲಿ ಪೋಲಿಸ್ ಚೌಕಿ ಇತ್ತು. ಕೆಲವು ದಶಕಗಳ ಹಿಂದೆ ಕೂಡ ಇತ್ತು. ಆದರೆ ಈಗ ಇಲ್ಲ. ಕಾರಣ ಯಾವುದೆಂದು ತಿಳಿದು ಬಂದಿಲ್ಲ. ರಾಜಕೀಯ ನಾಯಕರ ಇಚ್ಚಾ ಶಕ್ತಿಯ ಕೊರತೆಯಿಂದ ಮಾಣಿಯಲ್ಲಿ ಪೋಲಿಸ್ ಔಟ್ ಪೋಸ್ಟ್ ನಡೆಯಲಿಲ್ಲ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...