Monday, January 26, 2026

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಬೀದಿ ನಾಯಿಗಳ ಕಾಟ, ಭಕ್ತಾದಿಗೆ ಕಚ್ಚಿದ ಬೀದಿ ನಾಯಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಭಕ್ತಾದಿಗಳಿಗೆ, ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.

ಇಂದು ಮುಂಜಾನೆ ದೇವಸ್ಥಾನದ ಒಳಗಡೆ ಧರ್ಮಸಮ್ಮೇಳನ ಮಂಟಪದಲ್ಲಿ ಹಾಸನಮೂಲದ ವ್ಯಕ್ತಿಯ ಕೈಗೆ ಬೀದಿನಾಯಿ ಕಚ್ಚಿದ ಪರಿಣಾಮ ವ್ಯಕ್ತಿಯ ಕೈಗೆ ಬಲವಾದ ಗಾಯವಾಗಿದ್ದು ಇವರನ್ನು ಸಾಮಾಜ ಸೇವಕ ರವಿಕಕ್ಕೆಪದವು ಮತ್ತಿತರರು ಸೇರಿ ಕಡಬದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಬೀದಿನಾಯಿಗಳ ಅಟ್ಟಹಾಸ ಹಾಗೂ ಹೋರಿಗಳ ಹಾವಳಿಯಿಂದ ಹಲವಾರು ವಾಹನಗಳಿಗೆ ಹಾಗೂ ಇತ್ತೀಚೆಗೆ ಶಾಲಾ ವಿಧ್ಯಾರ್ಥಿಗೆ, ಸರ್ಪಸಂಸ್ಕಾರ ಅರ್ಚಕರಿಗೆ ಹಾನಿ ಉಂಟಾಗಿದ್ದು ನಿನ್ನೆಯದಿನ ರಸ್ತೆಗೆ ಬೀದಿನಾಯಿ ಅಡ್ಡಬಂದ ಪರಿಣಾಮ ಜಗದೀಶ್‌ಕಿಲ್ರ‍್ಕಜೆ ಎಂಬವರ ಆಟೋರಿಕ್ಷಾ ಪಲ್ಟಿಯಾಗಿರುವ ಘಟನೆಯೊಂದು ನಡೆದಿದ್ದು ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಒಂದು ವಾರದ ಹಿಂದೆಯಷ್ಟೇ ಹೊಸದಾಗಿ ಖರೀದಿಸಿದಂತ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದೆ,ಇದರ ಬಗ್ಗೆ ಅಟೋ ರಿಕ್ಷಾ ಚಾಲಕರು ಹಾಗೂ ಗ್ರಾಮಸ್ಥರು ಹಲವಾರು ಬಾರಿ ಪಶು ವೈಧ್ಯಾಧಿಕಾರಿಗಳಿಗೆ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮನವಿಮಾಡಿದ್ದು ಸುಬ್ರಹ್ಮಣ್ಯದಲ್ಲಿ ಪಶು ವೈಧ್ಯಾಧಿಕಾರಿ ನೇಮಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೨೪ ಗಂಟೆಗಳ ವೈದ್ಯಕೀಯ ಸೇವೆ ಕಲ್ಪಿಸಬೇಕೆಂದು ಸಮಾಜಸೇವಕ ರವಿಕಕ್ಕೆ ಪದವು ಆಟೋ ಚಾಲಕಮಾಲಕರಾದಂತ ಡಿ.ಶೇಶಕುಮಾರ್ ಶೆಟ್ಟಿ, ದಿನೇಶ್ ಶೀರಾಡಿ, ರಾಧಕೃಷ್ಣ,ಯಶೋಧರ ಮಾಧ್ಯಮದ ಜೊತೆ ಮಾತನಾಡಿದರು.

ಇದರ ಬಗ್ಗೆ ಸುಬ್ರಹ್ಮಣ್ಯ ಗ್ರಾಮ ಸಭೆಯಲ್ಲಿಯೂ ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದು ಇಂದಿನವರೆಗೂ ಯಾವುದೇ ಕ್ರಮ ಕೈಗಂಡಿಲ್ಲವೆಂದು ಸುಬ್ರಹ್ಮಣ್ಯದ ಗ್ರಾಮಸ್ಥರು ಆರೋಪ ವ್ಯಕ್ತಪಡಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...