Monday, January 26, 2026

ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾಲಾವಧಿ ಕಜಂಬು ಜಾತ್ರೋತ್ಸವ

ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಕ್ಕಳನ್ನು ಹರಕೆ ರೂಪದಲ್ಲಿ ದೇವರಿಗೆ ಒಪ್ಪಿಸುವ ವಿಶಿಷ್ಟ ಸಂಪ್ರದಾಯ ಹೊಂದಿರುವ ಕಾಲಾವಧಿ ಕಜಂಬು ಜಾತ್ರೋತ್ಸವ ನಡೆಯಿತು.

ಶನಿವಾರ ರಾತ್ರಿ ವಿಟ್ಲ ಅರಮನೆಯಿಂದ ಅರಸು ಪ್ರತಿನಿಧಿ ಬಂಗಾರು ಅರಸರು ಆಗಮಿಸಿದ ಬಳಿಕ ಪಲ್ಲಕ್ಕಿ ಉತ್ಸವ ಬಲಿ, ದೇವರಿಗೆ ಪೂಜೆ ನಡೆಯಿತು.

ನಂತರ ದೇಗುಲದ ವಠಾರದಲ್ಲಿರುವ ಜಳಕ ಗುಂಡಿಯಲ್ಲಿ ಮಕ್ಕಳನ್ನು ಸ್ನಾನ ಮಾಡಿಸಿ,ದೇಗುಲದ ಗರ್ಭಗುಡಿಯ ಮೆಟ್ಟಿಲ ಬಳಿ ದೇವರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಒಪ್ಪಿಸಲಾಗುವುದು. ಬಳಿಕ ಗರ್ಭಗುಡಿಯ ನಾಲ್ಕು ಮೂಲೆಯಲ್ಲಿ ಕುಳಿತುಕೊಂಡಿರುವ ನಾಲ್ಪೋಳು ಎಂದು ಕರೆಯಲ್ಪಡುವ ದೈವ ಸೇವಕರಿಗೆ ಮುಷ್ಟಿ ಹಣ ಸಲ್ಲಿಸಿದರೆ ಕಜಂಬು ಹರಕೆ ಸಂದಾಯ ವಾಗುತ್ತದೆ. ಬಳಿಕ ಅನ್ನ ಭೋಜನ ಪ್ರಸಾದ ವಿತರಣೆಯಾಗುತ್ತದೆ.

ಈ ಬಾರಿ ಐದಾರು ಸಾವಿರಕ್ಕಿಂತಲೂ ಅಧಿಕ ಮಕ್ಕಳು ಕಜಂಬು ಹರಕೆಗೆ ಸಂದಾಯವಾದರು. ಈ ಕ್ಷೇತ್ರದಲ್ಲಿ ಸಂತೆ ಅಥವಾ ಇತರ ಯಾವುದೇ ವ್ಯಾಪಾರ ನಿಷಿದ್ಧವಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...