Thursday, June 26, 2025

ಗುಂಡಿಗೆ ಬಿದ್ದ ಕಾಡು ಕೋಣದ ಸಂರಕ್ಷಣೆಯ ಪ್ರಯತ್ನ ನಡೆಸುತ್ತಿರುವ ಬಂಟ್ವಾಳ ಅರಣ್ಯ ಇಲಾಖೆ

ಬಂಟ್ವಾಳ: ಕಾಡುಕೋಣವೊಂದು ಗೊಬ್ಬರ ಗ್ಯಾಸ್ ನ ಗುಂಡಿಯೊಳಗೆ ಬಿದ್ದ ಘಟನೆ ಕಾಡಬೆಟ್ಟು ಗ್ರಾಮದ ಕಾಡಬೆಟ್ಟು ಪೂರ್ಲೊಟ್ಟು ಎಂಬಲ್ಲಿ ನಡೆದಿದೆ. ಪೂರ್ಲೊಟ್ಟು ನಿವಾಸಿ ಎಲ್ಪ್ರೆಡ್ ಡಿಸೋಜ ಎಂಬವರ ಮನೆಯ ಗೊಬ್ಬರ ಗ್ಯಾಸ್ ನ ಗುಂಡಿಗೆ ಬಿದ್ದಿದೆ.

ಗೊಬ್ಬರ ಗ್ಯಾಸ್ ನ ಗುಂಡಿಯೊಳಗೆ ಬಿದ್ದಿರುವ ಕಾಡು ಕೋಣಕ್ಕೆ ಮತ್ತೆ ಮೇಲೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಗೊಂಡಿದೆ.
ಬೆಳಿಗ್ಗೆ ವೇಳೆ ಮನೆಯವರು ಗೊಬ್ಬರ ಗ್ಯಾಸ್ ಗೆ ಗೊಬ್ಬರ ಹಾಕಲು ಬಂದ ವೇಳೆ ಈ ಘಟನೆ ಬೆಳಕಿಗೆ ಬಂದ ಬಳಿಕ ಅವರು ಬಂಟ್ವಾಳ ಅರಣ್ಯ ಇಲಾಖೆ ಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಬಳಿಕ ಬಂಟ್ವಾಳ ಉಪವಲಯ ಸಂರಕ್ಷಣಾ ಧಿಕಾರಿ ಸುರೇಶ್ ಸ್ಥಳ ಕ್ಕೆ ಬೇಟಿ ನೀಡಿ ಕಾಡು ಕೋಣವನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಲಾಗುತ್ತಿದೆ.

 

ಸಾಕಷ್ಟು ಹೆದರಿಕೆಯಿಂದ ಜನರನ್ನು ನೋಡಿದಾಗ ದುರುಗಟ್ಟಿ ನಿಲ್ಲುವ ಕಾಡುಕೋಣವನ್ನು ಮೇಲಕ್ಕೆ ಎತ್ತಲು ಜೆಸಿಬಿ ತರಲಾಗಿದೆ. ಗುಂಡಿಯ ಸುತ್ತಲೂ ಮಣ್ಣು ತೆಗೆದ ಬಳಿಕ ಜಾಗರೂಕತೆಯಿಂದ ಕಾಡು ಕೋಣವನ್ನು ಮೇಲೆ ತರಬೇಕಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.
ಕಾಡು ಕೋಣವನ್ನು ನೋಡಲು ಊರಿನ ಜನ ತಂಡತಂಡೋಪವಾಗಿ ಬರುತ್ತಾ ಇದ್ದಾರೆ.

ರಾತ್ರಿ ಹೊತ್ತಿನಲ್ಲಿ ಕಾಡಿನಿಂದ ಬಂದಿರುವ ಈ ಕಾಡುಕೋಣ ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಹೋಗುವ ವೇಳೆ ಗೊಬ್ಬರ ಗ್ಯಾಸ್ ಗುಂಡಿ ಕಾಣದೆ ಬಿದ್ದಿರಬೇಕು ಎಂದು ಹೇಳಲಾಗುತ್ತದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಗಳಾದ ವಿನಯ್, ಬಾಸ್ಕರ್, ಸ್ಮಿತಾ, ಅನಿತಾ ಅನಿಲ್ ಹಾಗೂ ಪರಿಸರ ಸ್ನೇಹಿ ಕಿರಣ್ ಪಿಂಟೋ ಮತ್ತು ಗ್ರಾಮಸ್ಥರ ಸ್ಥಳ ದಲ್ಲಿದ್ದು ಕಾಡು ಕೋಣದ ರಕ್ಷಣೆಯಲ್ಲಿ ತೊಡಗಿದ್ದಾರೆ

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...