Wednesday, February 4, 2026

ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡು ಆಶ್ರಯದಲ್ಲಿ 15 ನೇ ವರ್ಷದ ಯಕ್ಷಗಾನ, ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಯಕ್ಷಮಿತ್ರರು ಕೈಕಂಬ ಬಿ. ಸಿ. ರೋಡು ಇದರ ಆಶ್ರಯದಲ್ಲಿ 15 ನೇ ವರ್ಷದ ಯಕ್ಷಗಾನ, ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯ ಹೊರಾಂಗಣದಲ್ಲಿ ಭಾನುವಾರ ಸಂಜೆ ನಡೆಯಿತು.

ಈ ಸಂದರ್ಭ ಮೇಳದ ಹಿರಿಯ ಕಲಾವಿದ ದಿವಾಕರ ರೈ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಈ ಸನ್ಮಾನದಿಂದಾಗಿ ಯಕ್ಷಗಾನದಲ್ಲಿನ ತನ್ನ ಹೊಣೆಗಾರಿಕೆಯನ್ನು ಹೆಚ್ಚಿಸಿದೆ ಎಂದರು.

ಚಂದ್ರಹಾಸ ರೈ ಬಾಲಾಜಿ ಬೈಲು ಅವರು ಸನ್ಮಾನಿಸಿ ಮಾತನಾಡಿ, ತನ್ನನ್ನು ತಾವೇ ಸನ್ಮಾನಿಸಿಕೊಳ್ಳುವ ಪ್ರವೃತಿ ಹೆಚ್ಚಾಗುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಸಂಘಟಕರೇ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು ನಿಜವಾದ ಸನ್ಮಾನ ಈ ನಿಟ್ಟಿನಲ್ಲಿ ಕೈಕಂಬಯಕ್ಷಪ್ರಿಯರ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದರು.

ಅತಿಥಿಯಾಗಿದ್ದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಅಜಕ್ಕಲ ಗಿರೀಶ್ ಭಟ್ ಮಾತನಾಡಿ,ಸಾಹಿತ್ಯ ,ವೇಷಭೂಷಣ, ಹಾಡುಗಾರಿಕೆ,ಬಣ್ಣಗಾರಿಕೆಯಂತಹ ಕಲೆಯ ವ್ಯಾಪ್ತಿಯೊಳಗೆ ಬರುವಂತಹ ಯಕ್ಷಗಾನಕ್ಕೆ ಕೊಡುಗೆ ನೀಡಿದವರನ್ನು ಗೌರವಿಸುವುದು‌ ಶ್ಲಾಘನೀಯವಾಗಿದೆ ಎಂದರು.

ಯಕ್ಷಪ್ರಿಯರು ಸಂಸ್ಥೆಯ ಪ್ರಮುಖರಾದ ಶಂಕರಶೆಟ್ಟಿ ಪರಾರಿಗುತ್ತು,ಸದಾಶಿವ ಕೈಕಂಬ, ಸದಾನಂದ ಶೆಟ್ಟಿ ರಂಗೋಲಿ,ವಿಶ್ವನಾಥ,ಭುಜಂಗ ಸಾಲಿಯಾನ್ ರವರು ವೇದಿಕೆಯಲ್ಲಿದ್ದರು.

ಕಿಶೋರ್ ಭಂಡಾರಿ ಸ್ವಾಗತಿಸಿ,ನಿರೂಪಿಸಿದರು.ಮೇಳದ ಪ್ರಬಂಧಕ ಹರೀಶ್ ಬೊಳಂತಿಮೊಗರು ವಂದಿಸಿದರು‌.

ಹನುಮಗಿರಿ ಮೇಳದವರಿಂದ “ನಮೋ ರಘುವಂಶ ದೀಪ” ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...