Wednesday, July 9, 2025

ವರ್ಲಿ ಹಾಗೂ ಮಧುಬನಿ ಶೈಲಿಯ ಅಲಂಕಾರಿಕ ನಕ್ಷೆಗಳಿಂದ ಕಂಗೊಳಿಸುತ್ತಿರುವ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ‌ ಕಚೇರಿ

ಬಂಟ್ವಾಳ: ಕೈಕುಂಜೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಈಗ ಬಣ್ಣ ಬಣ್ಣದಿಂದ ಕಂಗೋಳಿಸುತ್ತಿದೆ.

ಇಲ್ಲಿಗೆ ಬರುವ ಪ್ರತಿಯೊಬ್ಬರ ಮನಸ್ಸು ಸಂತೋಷ ತುಂಬಬೇಕು ಎಂಬ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರ ವಿಶಿಷ್ಟ ಚಿಂತನೆ ಕಚಯನ್ನು ಕಂಗೊಳಿಸಿದೆ.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯು ವರ್ಲಿ ಹಾಗೂ ಮಧುಬನಿ ಶೈಲಿಯ ಅಲಂಕಾರಿಕಾ ನಕ್ಷೆಗಳಿಂದ ಕಂಗೊಳಿಸುತ್ತಿದ್ದು, ತಾಲೂಕಿನ ಚಿತ್ರಕಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಚಿತ್ರಕಲಾ ಶಿಕ್ಷಕರೇ ಸೇರಿಕೊಂಡು ಕಚೇರಿಯ ಅಂದವನ್ನು ಹೆಚ್ಚಿಸಿದ್ದಾರೆ.

ಕೈಕುಂಜೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಈ ಹಿಂದೆಯೂ ವರ್ಲಿ ಚಿತ್ತಾರಗಳಿದ್ದರೂ, ಪ್ರಸ್ತುತ ಹೊಸದಾಗಿ ಮತ್ತು ಕೊಂಚ ಭಿನ್ನವಾಗಿ ರೇಖಾ ಚಿತ್ರಗಳನ್ನು ಬಿಡಿಸಲಾಗಿದೆ. ಕಚೇರಿಯ ಒಳ ಭಾಗ, ಬಿಇಒ ಚೇಂಬರ್, ಮೇಲಿನ ಮಹಡಿ ಹೀಗೆ ಎಲ್ಲಾ ಕಡೆಯೂ ಬಣ್ಣ ಬಣ್ಣದ ಚಿತ್ತಾರಗಳು ಕಂಗೊಳಿಸುತ್ತಿವೆ.

ಈಗಾಗಲೇ ಬಹುತೇಕ ೯೦ ಶೇ.ದಷ್ಟು ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುರಳಿಕೃಷ್ಣ ರಾವ್ ವಾಮದಪದವು ಅವರ ನೇತೃತ್ವದಲ್ಲಿ ಚಿತ್ರಕಲಾ ಶಿಕ್ಷಕರಾದ ಚೆನ್ನಕೇಶವ ಡಿ.ಆರ್. ಪೆರ್ನೆ, ತಾರಾನಾಥ ಕೈರಂಗಳ, ಧನಂಜಯ ಕೊಯಿಲ, ಉಮೇಶ್ ಬೊಳಂತಿಮೊಗರು, ಅಮೀನಾ ಶೇಖ್ ಸಿದ್ದಕಟ್ಟೆ ಹಾಗೂ ಬಾಲಕೃಷ್ಣ ಶೆಟ್ಟಿ ಸಜೀಪಮೂಡ ಹೀಗೆ ೭ ಮಂದಿ ಶಿಕ್ಷಕರು ಈ ಕಾರ್ಯದಲ್ಲಿ ತೊಡಗಿದ್ದಾರೆ.

ಒಟ್ಟು ೧೪ ದಿನಗಳ ಕಾಲ ಈ ತಂಡ ಚಿತ್ತಾರಗಳನ್ನು ಬಿಡಿಸುವ ಕೆಲಸ ಮಾಡಿದ್ದು, ಶಿಕ್ಷಣ, ಬಾಲ್ಯ, ಆಚರಣೆಗಳು ಮೊದಲಾದ ವಿಚಾರವನ್ನು ಚಿಂಬಿಸುವ ರೇಖಾ ಚಿತ್ರಗಳು ಗಮನ ಸೆಳೆಯುತ್ತಿವೆ. ಪ್ರಸ್ತುತ ಶಾಲೆಗಳು ಇಲ್ಲದೇ ಇರುವುದರಿಂದ ಚಿತ್ರಕಲಾ ಶಿಕ್ಷಕರು ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದು, ಬಿಇಒ ಕಚೇರಿಯ ಅಂದವನ್ನು ಹೆಚ್ಚಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಿಬಂದಿಯ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆದಿದೆ.

ಚಿತ್ರಕಲಾ ಶಿಕ್ಷಕರ ಸಂಘವು ಇದೇ ರೀತಿ ಹಲವು ಕಡೆಗಳಲ್ಲಿ ವರ್ಲಿ ಚಿತ್ತಾರಗಳನ್ನು ಬಿಡಿಸುವ ಕಾರ್ಯ ಮಾಡಿದ್ದು, ಸರಕಾರಿ ಕಚೇರಿಗಳು ಸೇರಿದಂತೆ ಇತರೆಡೆಗಳಲ್ಲಿ ಬಣ್ಣ ಹಚ್ಚುವ ಕಾರ್ಯ ಮಾಡಿದ್ದಾರೆ. ಜತೆಗೆ ತಮ್ಮ ವಿದ್ಯಾರ್ಥಿಗಳನ್ನೂ ಕೂಡ ಸೇರಿಸಿಕೊಂಡು ಹಲವೆಡೆ ಚಿತ್ರಗಳನ್ನು ಬಿಡಿಸುವ ಕಾರ್ಯ ನಡೆದಿದೆ.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...