Thursday, February 13, 2025

ಕೈಕುಂಜೆ: ಮನೆಗೆ ನುಗ್ಗಿ ಕಳವು

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದೆ ವೇಳೆಗೆ ಮುಂಬಾಗಿಲ ಮೂಲಕ ನುಗ್ಗಿ ಕಪಾಟಿನಲ್ಲಿದ್ದ ಬೆಳ್ಳಿಯ ಸಾಮಾಗ್ರಿಗಳು ಹಾಗೂ ನಗದನ್ನು ಕಳ್ಳರು ದೋಚಿದ ಘಟನೆ ನಿನ್ನೆ ಬಿ.ಸಿ.ರೋಡು ಕೈಕುಂಜೆಯಲ್ಲಿ ನಡೆದಿದೆ.
ಕೈಕುಂಜೆಯ ನಿವಾಸಿ ಶ್ರೀಹರಿ ಎಳಚಿತ್ತಾಯ ಅವರು ತಮ್ಮ ಪತ್ನಿಯ ಜತೆಗೆ ಬಿ.ಸಿ.ರೋಡಿಗೆ ತೆರಳಿದ್ದ ವೇಳೆ ಅವರ ಮನೆಯಲ್ಲಿ ಕಳವಿನ ಘಟನೆ ನಡೆದಿದ್ದು, ಕಪಾಟಿನ ಒಳಗೆ ಪ್ಲಾಸ್ಟಿಕ್ ಕವರಿನಲ್ಲಿದ್ದ ಬೆಳ್ಳಿಯ ಸಾಮಾಗ್ರಿಗಳಾದ ತಂಬಿಗೆ, ದೀಪಗಳು, ಬಟ್ಟಲುಗಳು, ಜಪ ಮಾಡುವ ಸಾಮಾಗ್ರಿಗಳು, ಆರತಿ ತಟ್ಟೆಗಳು ಹಾಗೂ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನಲ್ಲಿಟ್ಟಿದ್ದ ನಗದನ್ನು ಕಳ್ಳರು ದೋಚಿದ್ದಾರೆ ಎಂದು ಶ್ರೀಹರಿ ಅವರ ಪತ್ನಿ ಶಾರದಾ ಕೆ. ದೂರಿನಲ್ಲಿ ತಿಳಿಸಿದ್ದಾರೆ.
ಕಳವಾದ ಬೆಳ್ಳಿಯ ಸಾಮಗ್ರಿಗಳು ಮತ್ತು ನಗದಿನ ಒಟ್ಟು ಮೌಲ್ಯ ಸುಮಾರು 24,500 ರೂ.ಗಳೆಂದು ಅಂದಾಜಿಸಲಾಗಿದ್ದು, ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...