ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಕೆಪದವು ಗರೋಡಿ ಕ್ಷೇತ್ರದ ನೂತನ ಶಿಲಾಮಯ ಆಲಯದಲ್ಲಿ ಶ್ರೀ ಕಡಂಬಿಲ್ತಾಯ,ಕೊಡಮಣಿತ್ತಾಯಿ,ದೈವೊಂ

ಶನಿವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಟಿ-ಚನ್ನಯ್ಯರೇ ಸ್ಥಾಪಿಸಿದ ಜಿಲ್ಲೆಯ 66 ಗರೋಡಿಗಳ ಪೈಕಿ ಕಕ್ಕೆಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿಯು ಒಂದಾಗಿದೆ. ವಿಶಿಷ್ಠವಾದ ತೌಳವ ದ್ರಾವಿಡ ಶೈಲಿಯಲ್ಲಿ ಕಕ್ಕೆಪದವು ಗರೋಡಿಯನ್ನು ಶಿಲಾಮಯವಾಗಿ ಸುಮಾರು 3 ಕೋಟಿ ರೂ.ವೆಚ್ಚದಲ್ಲಿ ಪುನರ್ ನಿರ್ಮಿಸಲಾಗುತ್ತಿದೆ,ಕಕ್ಕೆಪದವು ಗರೋಡಿಯ ಎರಡೂವರೆ ಎಕ್ರೆ ಜಮೀನನ್ನು ಸರಕಾರ ಕಳೆದ ಸಂಪುಟಸಭೆಯಲ್ಲಿ ಗರೋಡಿಯ ಹೆಸರಿಗೆ ಮಂಜೂರಾತಿ ನೀಡಿದೆ ಎಂದರು.ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರವರ ಮಾರ್ಗದರ್ಶನ,ಕಕ್ಯ ಶ್ರೀನಿವಾಸ ಅರ್ಮುಡ್ತಾಯರವರ ಉಪಸ್ಥಿತಿಯಲ್ಲಿ ಕ್ಷೇತ್ರದ ಅಸ್ರಣ್ಣರಾದ ರಾಜೇಂದ್ರ ಅರ್ಮುಡ್ತಾಯರವರ ನೇತೃತ್ವದಲ್ಲಿ ವಿವಿಧ ವೈಧಿಕವಿಧಿವಿಧಾನಗಳು ನಡೆಯಲಿದ್ದು,ಮೇ.17ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಸರ್ವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದರು.ಮೇ.19 ರಂದು ಶಿಖರ,ಧ್ವಜಸ್ತಂಭ,ದೈವಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ನಡೆಯಲಿದೆ.ಬ್ರಹ್ಮಕಲಶದ ಪ್ರತಿದಿನ ನಿರಂತರವಾಗಿ ಸಾರ್ವಜನಿಕ ಅನ್ನಸಂತರ್ಪಣೆ,ಸಂಜೆಯ ವೇಳೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿವಿಧ ಕ್ಷೇತ್ರದ ಮಠಾಧೀಶರು ಆರ್ಶೀವಚನ ನೀಡಲಿದ್ದಾರೆ.ಸಾಮಾಜಿಕ,ರಾಜಕೀಯ,ಧಾ