Wednesday, January 28, 2026

ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಗರಡಿ ಕ್ಷೇತ್ರ ಕೊಡಿಮರ ತೈಲಾಧಿವಾಸ ಕಾರ್ಯಕ್ರಮ

ಬಂಟ್ವಾಳ: ಸುಮಾರು ೩ ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬದರ್ಕಳ ಗರಡಿ ಕ್ಷೇತ್ರದಲ್ಲಿ ನೂತನ ಕೊಡಿಮರದ ತೈಲಾಧಿವಾಸ ಕಾರ್ಯಕ್ರಮ ಶುಕ್ರವಾರ ಜರಗಿತು.
ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಮಾರು ಮೂವತ್ತೇಳುವರೆ ಅಡಿ ಉದ್ದದ ಕೊಡಿಮರವನ್ನು ಶುದ್ಧ ಎಳ್ಳೆಣ್ಣೆಯಲ್ಲಿ ನೆನೆಸಿಡಲಾಗುತ್ತಿದೆ. ಈ ಮೂಲಕ ಕೊಡಿಮರ ಗಾಳಿ, ಮಳೆಯ ಪ್ರಭಾವದಿಂದ ನಶಿಸದಂತೆ ಕಾಪಿಡಲು ಹಿರಿಯರು ವೈಜ್ಞಾನಿಕವಾಗಿ ಕಂಡು ಕೊಂಡ ಮಾರ್ಗವಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಭಕ್ತಾಽಗಳು ಕೊಡಿಮರಕ್ಕೆ ಎಳ್ಳೆಣ್ಣೆ ಸಮಿರ್ಪಿಸಿದರು. ಬಳಿಕ ಬ್ರಹ್ಮ ಬದರ್ಕಳ ಗರಡಿಯ ಮರದ ಮೇಲ್ಛಾವಣಿಗೆ ನಿರ್ಮಾಣ ಮುಹೂರ್ತ ನಡೆಯಿತು.
ಕ್ಷೇತ್ರ ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಗೌರವ ಸಲಹೆಗಾರರಾದ ರತ್ನ ಕುಮಾರ ಆರಿಗ ನಾಲ,ಕೊಡಿಮರ ದಾನಿ ಪಟ್ಟದಬಲು ಕೃಷ್ಣ ಪ್ಪ ಮಾಸ್ಟರ್, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ, ಪುನರ್ನಿರ್ಮಾಣ ಸಮಿತಿ ಪದಾಽಕಾರಿಗಳಾದ ಎ.ಚೆನ್ನಪ್ಪ ಸಾಲ್ಯಾನ್ ಆಜೋಡಿ, ದಾಮೋದರ ನಾಯಕ್, ಸಂಪತ್ ಕುಮಾರ್ ಶೆಟ್ಟಿ, ಸಂಜೀವ ಪೂಜಾರಿ ಕೇರ್ಯ, ಡಾ| ದಿನೇಶ್ ಬಂಗೇರ, ಡೀಕಯ ಬಂಗೇರ ಕರ್ಲ, ವೀರೇಂದ್ರ ಕುಮಾರ್ ಜೈನ್,ಜಯ ಶೆಟ್ಟಿ ಕಿಂಜಾಲು, ಚೆನ್ನಪ್ಪ ಪೂಜಾರಿ ತಿಮರಡ್ಡ, ನಾರಾಯಣ ಪೂಜಾರಿ ಬಿತ್ತ, ಡೀಕಯ ಸಾಲ್ಯಾನ್, ಲೋಕಯ ನಾಯ್ಕ, ರಾಮಪ್ಪ ಪೂಜಾರಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಾದ ವಾಸುದೇವ ಮಯ್ಯ, ಗಣೇಶ ಕೆ., ಶ್ರೀಧರ ಆಚಾರ್ಯ, ಸದಾನಂದ ಗೌಡ, ಚೇತನ್‌ಎಚ್., ಜಯಾನಂದ ಪೂಜಾರಿ, ಡೀಕಯ್ಯ ಕುಲಾಲ್, ಚಂದ್ರಶೇಖರ ಕೆ., ಗುರುಪ್ರಕಾಶ್, ರಾಜೀವ, ಸುಂದರ ದೇವಾಡಿಗ, ಪ್ರದೀಪ್, ಶ್ರೀ ಕ್ಷೇ.ಧ.ಯೋಜನೆ ಸೇವಾ ಪ್ರತಿನಿಽ ಶೇಖರ ಕಂಚಲಪಲ್ಕೆ, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಪರಮೇಶ್ವರ, ರಾಮಯ್ಯ ಭಂಡಾರಿ, ರಾಜೇಂದ್ರ, ಡೀಕಯ್ಯ ಪೂಜಾರಿ, ವಸಂತ ಆರ್., ನವೀನ್ ಶೆಟ್ಟಿ, ತಾರಾನಾಥ , ಬಾಬು ನಾಯ್ಕ ಮತ್ತಿತರರು ಭಾಗವಹಿಸಿದ್ದರು.

 

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...