Monday, January 26, 2026

ಕಕ್ಯಪದವು ಶ್ರೀ ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರ ದೃಢ ಕಲಶ, ಅಭಿನಂದನೆ

ಬಂಟ್ವಾಳ : ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ದೈವೊಂಕುಳು, ಮಾಯಂದಾಲ್, ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರದಲ್ಲಿ ಶನಿವಾರ ದೃಢ ಕಲಶ ಮತ್ತು ಅಭಿನಂದನಾ ಕಾರ್ಯಕ್ರಮ ಜರಗಿತು.
ಕಕ್ಯ ಶ್ರೀನಿವಾಸ ಅರ್ಮುಡ್ತಾಯರ ಮಾರ್ಗದರ್ಶನದಲ್ಲಿ, ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ, ಸುಽಂದ್ರ ಅರ್ಮುಡ್ತಾಯ ಅವರ ಮುಂದಾಳತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.


ಬೆಳಗ್ಗೆ ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಪರ್ವಗಳು, ಬಳಿಕ ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ದೈವೊಂಕುಳು, ಮಾಯಂದಾಲ್ ಮತ್ತು ಬದರ್ಕಳಿಗೆ ದೃಢ ಕಲಶ ನಡೆಯಿತು. ಬಳಿಕ ಅಭಿನಂದನಾ ಕಾರ್ಯಕ್ರಮ, ಅನ್ನ ಸಂತರ್ಪಣೆ ನಡೆಯಿತು.
ಮಾಜಿ ಸಚಿವ, ಪುನರ್ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ, ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ವಾಸ್ತು ಶಿಲ್ಪಿ ಪ್ರಮಲ್ ಕುಮಾರ್, ಶಿಲ್ಪಿಗಳಾದ ಜಯರಾಮ ಆಚಾರ್ಯ, ಸದಾಶಿವ ಗುಡಿಗಾರ, ಪ್ರಮುಖರಾದ ಸೇಸಪ್ಪ ಕೋಟ್ಯಾನ್,ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಎ. ಚೆನ್ನಪ್ಪ ಸಾಲ್ಯಾನ್ ಆಜೋಡಿ, ಕೆ.ಮೋನಪ್ಪ ಪೂಜಾರಿ ಕಂಡೆತ್ಯಾರು, ವಿಶ್ವನಾಥ ಸಾಲ್ಯಾನ್ ಬಿತ್ತ, ಡೀಕಯ ಬಂಗೇರ ಕೆಳಗಿನ ಕರ್ಲ, ದಾಮೋದರ ನಾಯಕ್ ಉಳಿ, ರವಿ ಪೂಜಾರಿ ಚಿಲಿಂಬಿ, ಕೆ. ಮೋನಪ್ಪ ಪೂಜಾರಿ ಕಂಡೆತ್ಯಾರು, ಡಾ. ರಾಜಾರಾಮ ಕೆ.ಬಿ., ಡಾ. ದಿನೇಶ್ ಬಂಗೇರ, ಇಂದಿರೇಶ್, ಗುಣಕರ ಅಗ್ನಾಡಿ, ಚಿದಾನಂದ ಕಡೇಶಿವಾಲಯ, ಪ್ರಶಾಂತ್ ಪುಂಜಾಲಕಟ್ಟೆ, ಜಾರಪ್ಪ ಪೂಜಾರಿ, ಬೇಬಿ ಕೃಷ್ಣಪ್ಪ, ಧರ್ಣಪ್ಪ ಪೂಜಾರಿ, ರೋಹಿನಾಥ ಪಟ್ರಾಡಿ, ನವೀನ್ ಕುಮಾರ್, ಸಂಪತ್ ಕುಮಾರ್ ಶೆಟ್ಟಿ, ಚಂದ್ರಶೇಖರ ಕಂರ್ಬಡ್ಕ, ಗುಣಶೇಖರ ಕೊಡಂಗೆ, ಸಂಜೀವ ಪೂಜಾರಿ ಕೇರ್ಯ, ವೀರೇಂದ್ರ ಕುಮಾರ್ ಜೈನ್, ಸಂಜೀವ ಗೌಡ ಅಗಲ, ಚಿದಾನಂದ ರೈ, ಚೇತನ್ ಹೂರ್ದೊಟ್ಟು, ಜಗದೀಶ ಕೊಲ, ಯತೀಶ್ ಶೆಟ್ಟಿ, ವಾಸುದೇವ ಮಯ್ಯ, ಗಣೇಶ್ ಕೆ., ಶ್ರೀಧರ ಆಚಾರ್ಯ, ಗುರುಪ್ರಕಾಶ್, ರಾಜೀವ ಕಕ್ಯಪದವು, ಸುಂದರ ದೇವಾಡಿಗ, ಪರಮೇಶ್ವರ ನಾಯ್ಕ, ರಾಮಯ್ಯ ಭಂಡಾರಿ, ಜಯಾನಂದ ಪೂಜಾರಿ, ತಿಲಕ್, ಪವನ್ ಮತ್ತಿತರರು ಭಾಗವಹಿಸಿದ್ದರು. ಬಳಿಕ ಅನ್ನ ಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...