Monday, February 10, 2025

ಕಕ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ : ಬ್ರಹ್ಮಕಲಶ ಪೂರ್ವಭಾವಿ ಸಭೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಮುಂಬರುವ ಬ್ರಹ್ಮ ಕಲಶೋತ್ಸವ ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಪೂರ್ವಭಾವಿ ಸಮಾಲೋಚನ ಸಭೆ ಕ್ಷೇತ್ರದ ವಠಾರದಲ್ಲಿ ಮಂಗಳವಾರ ಜರಗಿತು.
ಮಾಜಿ ಸಚಿವ, ಸಮಿತಿ ಪುನರ್ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಅವರು ಮಾತನಾಡಿ, ಕಕ್ಯಪದವುನಲ್ಲಿ ಆದಿಕಾಲದಿಂದ ಆರಾಧಿಸಿಕೊಂಡು ಬರುತ್ತಿರುವ ಕೋಟಿ-ಚೆನ್ನಯರ ಗರಡಿಯನ್ನು ಸಂಪ್ರದಾಯಬದ್ಧವಾಗಿ ಪುನರ್ನಿರ್ಮಾಣಗೊಳಿಸಲಾಗುತ್ತಿದ್ದು , ದೈವ ದೇವರ ಅನುಗ್ರಹದಿಂದ ಮೇ 19ರಂದು ಬ್ರಹ್ಮಕಲಶೋತ್ಸವ ಸಾಂಗವಾಗಿ ನೆರವೇರಲಿದೆ. ಈ ಪುಣ್ಯ ಕಾರ್ಯದಲ್ಲಿ ಸರ್ವರೂ ಜವಾಬ್ದಾರಿ ವಹಿಸಿ ಭಾಗಿಗಳಾಗಬೇಕು ಎಂದು ಹೇಳಿದರು.
ಎಂ. ಮೋನಪ್ಪ ಪೂಜಾರಿ ಕಂಡೆತ್ಯಾರು ಅವರು ಇದುವರೆಗಿನ ಕಾಮಗಾರಿಗಳ ಲೆಕ್ಕ ಪತ್ರ ಮಂಡಿಸಿದರು. ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವದ ಸ್ವಾಗತ ಸಮಿತಿಯನ್ನು ಘೋಷಿಸಲಾಯಿತು. ಗೌರವಾಧ್ಯಕ್ಷರಾಗಿ ಬಿ.ರಮಾನಾಥ ರೈ, ಸಂಚಾಲಕರಾಗಿ ಕಂಕನಾಡಿ ಗರಡಿಯ ಸಂಚಾಲಕ ಚಿತ್ತರಂಜನ್, ಅಧ್ಯಕ್ಷರಾಗಿ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಕಾರ್ಯಾಧ್ಯಕ್ಷರಾಗಿ ಬಿ. ಪದ್ಮಶೇಖರ ಜೈನ್ ಹಾಗೂ ಮತ್ತಿತರ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅನುಮೋದಿಸಲಾಯಿತು.
ಪುತ್ತೂರು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಜಯಂತ ನಡುಬಲು, ಉಪಾಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್, ಕ್ಷೇತ್ರದ ತಾಂತ್ರಿಕ ತಜ್ಞ ಪ್ರಮಲ್ ಕುಮಾರ್ ಕಾರ್ಕಳ ಕ್ಷೇತ್ರದ ತಂತ್ರಿ ರಾಜೇಂದ್ರ ಅರ್ಮುಡ್ತಾಯ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಪದಾಧಿಕಾರಿಗಳಾದ ರಾಜವೀರ ಜೈನ್ ಬಾರ್‍ದಡ್ಡುಗುತ್ತು, ಬೇಬಿ ಕುಂದರ್, ಸಂಪತ್ ಕುಮಾರ್ ಶೆಟ್ಟಿ, ಸಂಜೀವ ಪೂಜಾರಿ ಗುರುಕೃಪಾ, ರವಿ ಪೂಜಾರಿ ಚಿಲಿಂಬಿ, ಜಯಂತ ನಡುಬಲು, ಗಣೇಶ್ ಪೂಜಾರಿ ಗುರುಪುರ, ಜಯಶೆಟ್ಟಿ ಕಿಂಜಾಲು, ಪುರುಷೋತ್ತಮ ಪೂಜಾರಿ ಮಜಲು, ಬೇಬಿ ಕೃಷ್ಣಪ್ಪ, ಡಾ. ದಿನೇಶ್ ಬಂಗೇರ, ಎಲ್‌ಸಿಆರ್ ಕಾಲೇಜು ಪ್ರಾಂಶುಪಾಲ ಪ್ರವೀಣ್ ಎಂ., ದಯಾನಂದ ಶೆಟ್ಟಿ ಅಮೈ, ಶರತ್ ಕುಮಾರ್ ಕೇದಗೆ, ಸಂಜೀವ ಪೂಜಾರಿ ಕೇರ್ಯ, ಧರ್ಣಪ್ಪ ಪೂಜಾರಿ ಕೋಂಗುಜೆ, ಗುಣ ಶೇಖರ ಕೊಡಂಗೆ, ರವಿ ಕಕ್ಯಪದವು(ಸುಬ್ರಹ್ಮಣ್ಯ), ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್‌ಬಿತ್ತ, ಸುಂದರ ಪೂಜಾರಿ ಬೋಳಂಗಡಿ, ಆನಂದ ಆಳ್ವ , ಚಂದ್ರಶೇಖರ ಕಂರ್ಬಡ್ಕ, ವಾಸುದೇವ ಮಯ್ಯ, ಗಣೇಶ್ ಕೆ., ರಾಮಯ್ಯ ಭಂಡಾರಿ, ಪವನ್ ಕಕ್ಯಪದವು, ತಿಲಕ್ ಪೂಜಾರಿ, ವೀರೇಂದ್ರ ಕುಮಾರ್ ಜೈನ್, ಬಾಬು ನಾಯ್ಕ, ಪರಮೇಶ್ವರ ನಾಯ್ಕ, ರಾಜೀವ ಕಕ್ಯಪದವು, ಹೇಮಂತ ಕುಮಾರ್, ನಾರಾಯಣ ಪೂಜಾರಿ ಬಿತ್ತ, ಗುರುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಡೀಕಯ್ಯ ಬಂಗೇರ ಸ್ವಾಗತಿಸಿದರು. ಡಾ| ರಾಜರಾಮ ಕೆ.ಬಿ. ವಂದಿಸಿದರು, ಡೀಕಯ್ಯ ಕುಲಾಲ್ ಮತ್ತು ಎಂ. ಮೋನಪ್ಪ ಪೂಜಾರಿ ಕಂಡೆತ್ಯಾರು ಕಾರ್ಯಕ್ರಮ ನಿರೂಪಿಸಿದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...