Wednesday, February 12, 2025

ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಕ್ಷೇತ್ರ ಫೆ.1: ನೂತನ ಕೊಡಿಮರ ಸಾಗಾಟ ಮೆರವಣಿಗೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವೆಂದು ಪ್ರಸಿದ್ಧಿ ಪಡೆದಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬದರ್ಕಳ ಗರಡಿ ಕ್ಷೇತ್ರವು ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಕ್ಷೇತ್ರಕ್ಕೆ ನೂತನ ಧ್ವಜಸ್ಥಂಭದ ಸಾಗಾಟ ಕಾರ್ಯಕ್ರಮ ಫೆ.1ರಂದು ಜರಗಲಿದೆ.
ಕ್ಷೇತ್ರದ ಗರ್ಭಗುಡಿಂiಷ್ಟೇ ಪ್ರಾಮುಖ್ಯತೆ ಹೊಂದಿರುವ ನಿಟ್ಟಿನಲ್ಲಿ ವೈದಿಕರ ಮಾರ್ಗದರ್ಶನದಂತೆ ನೂತನ ಧ್ವಜಸ್ಥಂಭ ಸ್ಥಾಪನೆಗೊಳ್ಳಲಿದ್ದು, ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಪಟ್ಟದಬಲುವಿನಿಂದ ಕೊಡಿಮರ ಆಗಮಿಸಲಿದೆ. ಬೆಳಗ್ಗೆ ಕೊಡಿಮರಕ್ಕೆ ವೃಕ್ಷ ಮುಹೂರ್ತ ನಡೆಯಲಿದ್ದು ಬಳಿಕ ಲಿಂಗಸ್ಥಳ, ಕರ್ಲಬೀಡು, ತಾಳಿಪಡ್ಪು ರಸ್ತೆಯಾಗಿ ಶ್ರೀ ಪಂಚದುರ್ಗಾ ಪರಮೇಶ್ವರಿಪ್ರೌಢಶಾಲಾ ಬಳಿಯಿಂದ ವಿವಿಧ ವಾಹನ, ಚೆಂಡೆ,ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ಕ್ಷೇತ್ರಕ್ಕೆ ಸಾಗಾಟ ನಡೆಯಲಿದೆ ಎಂದು ಕ್ಷೇತ್ರದ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...