Thursday, July 3, 2025

ಸ್ಪರ್ಶ ಕಲಾಮಂದಿರದಲ್ಲಿ ಜಾತ್ರೋತ್ಸವ-ಕಲಾಮೇಳ

ಬಿ.ಸಿ.ರೋಡು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ ಶನಿವಾರದಿಂದ ದೋಸೆ ಮೇಳ, ಮುಗಿಲೆತ್ತರಕ್ಕೆ ಸುತ್ತುವ ತೊಟ್ಟಿಲು, ಕೊಲಂಬಸ್, ಬ್ರೇಕ್‌ಡ್ಯಾನ್ಸ್, ಡ್ರ್ಯಾಗನ್ ಟ್ರೈನ್, ಬೋಟಿಂಗ್, ಜಂಪಿಂಗ್ ಇದೆಲ್ಲ ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುತ್ತಿದೆ ಎಂದು ಕಾರ್ಯಕ್ರಮದ ಮೇಲ್ವಿಚಾರಕ ಸುಭಾಶ್ಚಂದ್ರ ಜೈನ್ ತಿಳಿಸಿದರು.
ಅವರು ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಟಪುರ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬಂಟ್ವಾಳ ಜಾತ್ರೋತ್ಸವ, ಕಲಾಮೇಳ ಪ್ರಯುಕ್ತ ಬಂಟ್ವಾಳದ ಜನತೆಗೆ ಸಾಂಸ್ಕೃತಿಕ ಹಾಗೂ ಮನೋರಂಜನೆ ನೀಡುವ ನಿಟ್ಟಿನಲ್ಲಿ ಮಾರ್ಚ್ ೧೭ರ ತನಕ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿದ್ದು, ದಿನನಿತ್ಯ ರಾತ್ರಿ ೭.೩೦ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಾಮದಪದವು ಹವ್ಯಾಸಿ ಕಲಾವಿದರಿಂದ ಕದಂಬ ಕೌಶಿಕೆ ಯಕ್ಷಗಾನ, ವಿಟ್ಲ ಲಲಿತ ಕಲಾ ಸದನದವರಿಂದ ನೂಪೂರೋತ್ಸವ, ನಲ್ಕೆಮಾರ್ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ, ಪುಂಜಾಲಕಟ್ಟೆ ತಾಂಬೂಲ ಕಲಾವಿದರಿಂದ ಇಂಚಲಾ ಉಂಡಾ.. ನಂಬರೆ ಆಪುಜಿ ಹಾಸ್ಯಮಯ ನಾಟಕ, ನರಿಕೊಂಬು-ಬೋಳಂತೂರು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ, ವಗ್ಗ ಶಾರದಾ ಕಲಾವಿದರಿಂದ ಪೊರ್‍ಲಾವೊಡು ಈ ಬದಕ್ ಹಾಸ್ಯಮಯ ನಾಟಕ,  ನೃತ್ಯ ಸಿಂಚನ, ಕಾರ್ಕಳ ಯುವಚೇತನ ಕಲಾವಿದರಿಂದ ತೂಪುನಾರ್ ತೂಪೆರ್ ತುಳು ನಾಟಕ, ಬಿ.ಸಿ.ರೋಡು ಎಕ್ಸ್‌ಟ್ರೀಂ ಡ್ಯಾನ್ಸ್ ಕ್ರ್ಯೂ ಇವರಿಂದ ಫಿಲ್ಮಿ ಡ್ಯಾನ್ಸ್ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಮಹಾವಸ್ತುಪ್ರದರ್ಶನ ಮೇಳ, ನಾವುಕೇಳುವ ತುಂಟ ಪ್ರಶ್ನೆಗಳಿಗೆ ಕತ್ತೆಯಿಂದ ಉತ್ತರ, ಡ್ರೈಫುಟ್ಸ್, ಖಾದ್ಯಗಳು, ಪಾನೀಯಗಳು, ನೂತನ ಶೈಲಿಯ ತಿಂಡಿತಿನಸುಗಳು ಇದೆ ಎಂದು ಜಾತ್ರೋತ್ಸವದ ಪಾಲುದಾರ ನಜೀಮ್ ತಿಳಿಸಿದರು.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...