Friday, June 27, 2025

ಮಾಜಿ ತಾ.ಪಂ.ಸದಸ್ಯನ ಮನೆಯಲ್ಲಿ ಹಾಡುಹಗಲೇ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು

ಬಂಟ್ವಾಳ: ಮಾಜಿ ತಾ‌.ಪಂ.ಸದಸ್ಯ ರೋರ್ವರ
ಮನೆಯಲ್ಲಿ ಹಾಡುಹಗಲೇ ಲಕ್ಷಾಂತರ ರೂ ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಳಗಿನ ತುಂಬೆಯಲ್ಲಿ ನಡೆದಿದೆ.

ಕೆಳಗಿನ ತುಂಬೆ ನಿವಾಸಿ ಮಾಜಿ ತಾ.ಪಂ.ಸದಸ್ಯ, ಬಿಜೆಪಿ ಸಕ್ರೀಯ ಕಾರ್ಯ ಕರ್ತ ಸೋಮಪ್ಪ ಕೋಟ್ಯಾನ್
ಅವರ ಮನೆಯಲ್ಲಿ ಹಾಡುಹಗಲು ಮನೆಯಲ್ಲಿ ಯಾರು ಇಲ್ಲದ ವೇಳೆ ಹಿಂಬದಿಯ ಬಾಗಿಲು ಮುರಿದು ಮನೆಯೊಳಗೆ ಪ್ರವೇಶ ಮಾಡಿ ಕಳವು ನಡೆಸಿದ್ದಾರೆ .

12.92 600 ಲಕ್ಷ ರೂ ಬೆಲೆ ಬಾಳುವ ಬಂಗಾರ, 15 ಸಾವಿರ ನಗದು ಕಳವು ಮಾಡಿದ್ದಾರೆ.
ಗೊದ್ರೆಜ್ ನಲ್ಲಿಟ್ಟಿದ್ದ ಲಕ್ಷಾಂತರ ರೂ ಬೆಲೆ ಬಾಳುವ
398 ಗ್ರಾಂ. ಚಿನ್ನ.100 ಬೆಳ್ಳಿಯನ್ನು ಹಾಗೂ ನಗದು ಹಣವನ್ನು ಮಧ್ಯಾಹ್ನ. 11.30 ರಿಂದ 1 ಗಂಟೆಯ ಮಧ್ಯೆ ಕಳವು ಮಾಡಿರಬಹುದು ಎಂದು ಮನೆಯವರು ಹೇಳುತ್ತಿದ್ದಾರೆ.

ಮನೆಮಂದಿ ಎಲ್ಲರೂ ಕಾರ್ಯಕ್ರಮ ಕ್ಕೆ ಎಂದು ಅಲ್ಲಿಪಾದೆಗೆ
ತೆರಳಿದ್ದರು. ಸೋಮಪ್ಪ ಕೋಟ್ಯಾನ್ ಅವರ
ಸೊಸೆ ಕುಟುಂಬ ದ ನಾಗ ತಂಬಿಲ ಕಾರ್ಯಕ್ರಮಕ್ಕೆ ಹೋಗಿದ್ದರು.ಮಧ್ಯಾಹ್ನ ಕಾರ್ಯ ಕ್ರಮ ಮುಗಿಸಿ ಬರುವಾಗ
ಹಿಂಬದಿಯ ಬಾಗಿಲಿನ ಚಿಲಕಒಪನ್ ಮಾಡಿದ್ದು ಕಂಡು ಒಳಗೆ ಹೋಗಿ ನೋಡುವಾಗ ಕಳವು ನಡೆದಿದ್ದು ಗಮನಕ್ಕೆ ಬಂತು ಬಳಿಕ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಅಗಮಿಸಿದ್ದಾರೆ.
ಎ.ಎಸ್.ಪಿ.ಸೈದುಲು ಅಡಾವತ್ , ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್, ಎಸ್.ಐ.ಪ್ರಸನ್ನ ಬೇಟಿ ನೀಡಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...