Thursday, June 26, 2025

ಗ್ಯಾಸ್ ಟ್ಯಾಂಕರ್ ಕಂಟೈನರ್ ಲಾರಿಗೆ ಡಿಕ್ಕಿ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ವೊಂದು ಕಲ್ಲಡ್ಕದಲ್ಲಿ ಕಂಟೈನರ್
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗ್ಯಾಸ್ ಟ್ಯಾಂಕರ್ ನ ವೀಲ್ ತುಂಡಾಗಿ ರಸ್ತೆ ಮಧ್ಯದಲ್ಲಿ ಬಾಕಿಯಾಗಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.


ಘಟನೆಯಲ್ಲಿ ಗ್ಯಾಸ್ ಟ್ಯಾಂಕರ್ ಚಾಲಕನಿಗೆ ಅಲ್ಪಸ್ವಲ್ಪ ಗಾಯವುಂಟಾಗಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ರಸ್ತೆಯ ಮಧ್ಯದಲ್ಲಿ ವೀಲ್ ತುಂಡಾಗಿ ನಿಂತ ಪರಿಣಾಮ ಸಂಚಾರಕ್ಕೆ ಅಡಚಣೆಯಾಗಿತ್ತು.
ಅಪಘಾತದಲ್ಲಿ ಕಂಟೈನರ್ ಲಾರಿಯ ಡೀಸಲ್ ಟ್ಯಾಂಕ್ ಹೊಡೆದು ಸಾವಿರಾರು ರೂ ನಷ್ಟ ಸಂಭವಿಸಿದೆ.
ಗ್ಯಾಸ್ ಟ್ಯಾಂಕರ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣವೆನ್ನಲಾಗಿದೆ.
ಅಪಘಾತ ನಡೆಯುವ ಸಂದರ್ಭದಲ್ಲಿ ಎರಡು ಬೈಕ್ ಮತ್ತು ಒಂದು ಕಾರು ಸ್ವಲ್ಪ ದರದಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ನನ್ನು ನೋಡಿದ ಬೈಕ್ ಸವಾರರು ಮತ್ತು ಕಾರು ಚಾಲಕ ರಸ್ತೆಯಿಂದ ಬದಿಗೆ ಸರಿಸಿ ಚರಂಡಿಗಿಳಿದು ಹೋದದರಿಂದ ಪ್ರಾಣಾಪಯದಿಂದ ಪಾರಾಗಿದ್ದರು ಎನ್ನಲಾಗಿದೆ.
ಆದರೆ ಅ ಬಳಿಕ ಎದುರಿನಿಂದ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾಗಿ ಲಾರಿ ರಸ್ತೆ ಮಧ್ಯೆ ನಿಂತಿತ್ತು.
ಈ ಘಟನೆಯಿಂದ ಸಂಚಾರಕ್ಕೆ ಅಡಚಣೆ ಯಾಗಿದ್ದು ಬಂಟ್ವಾಳ ಟ್ರಾಫಿಕ್ ಎಸ್.ಐ .ರಾಜೇಶ್ ಕೆವಿ. ಅವರು ಲಾರಿಯನ್ನು ಕ್ರೇನ್ ನ ಸಹಾಯ ಪಡೆದು ರಸ್ತೆಯ ಮಧ್ಯ ದಿಂದ ಬದಿಗೆ ಸರಿಸುವ ಕಾರ್ಯಚರಣೆ ಮಾಡಿಸಿದ ಬಳಿಕ ಸಂಚಾರಕ್ಕೆ ಅವಕಾಶ ಉಂಟಾಯಿತು.

ದುರಂತ ನಡೆಯುವ ಮೊದಲು ಎಚ್ಚೆತ್ತುಕೊಳ್ಳಿ

ಗ್ಯಾಸ್ ಟ್ಯಾಂಕರ್ ಚಾಲಕರ ಅಜಾಗರೂಕತೆಯ ಹಾಗೂ ಅತೀವೇಗದ ಚಾಲನೆ ಮತ್ತೋಂದು ಪೆರ್ನೆ ದುರಂತಕ್ಕೆ ಕಾರಣವಾಗದಿರಲಿ….
ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡ ಪೆರ್ನೆ ದುರಂತ ಜನರ ಮನಸ್ಸಿನಲ್ಲಿ ಮಾಸುವ ಮೊದಲೇ ಇಂತಹ ಅವಘಡಗಳು ಮರುಕಳಿಸದಿರಲಿ ಎಂಬ ಅತಂಕದಲ್ಲಿರುವಾಗಲೇ ಚಾಲಕರ ಅಜಾಗರೂಕತೆ ಜನರನ್ನು ರೊಚ್ಚಿಗೆಬ್ಬಿಸುವಂತೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅವಘಡ ಗಳು ಜಾಸ್ತಿಯಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದೆ.
ಪೆರ್ನೆ ದುರಂತದ ಬಳಿಕ ರಾತ್ರಿ ಈ ವಾಹನಗಳು ಸಂಚಾರ ಮಾಡದಂತೆ ಜಿಲ್ಲಾಧಿಕಾರಿಗಳು ಅದೇಶ ಮಾಡಿದ್ದರು.
ಪ್ರಸ್ತುತ ಆದೇಶ ಗಾಳಿಗೆ ತೂರಲಾಗಿದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...