ಕಲ್ಲಡ್ಕ: ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರೀರಾಮ ವಿದ್ಯಾಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಚಿನ್ನಪ್ಪ ಕೆ. ಜಾಲ್ಸೂರು, ದೈಹಿಕ ಶಿಕ್ಷಣ ಶಿಕ್ಷಕರು, ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ, ಶಂಭೂರು ಇವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2020-21ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.



ಕಮಲ್ ಶೆಟ್ಟಿ ಅಧ್ಯಕ್ಷರು, ವ್ಯವಸಾಯ ಸೇವಾ ಸಹಕಾರಿ ಸಂಘ, ವಾಮದಪದವು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಗಳಾದ ಸತೀಶ್ ಭಟ್, ಶಿವಗಿರಿ, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್, ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಚೆಸ್ ಚಾಂಪಿಯನ್ಶಿಪ್ನಲ್ಲಿ ರಾಷ್ಟ್ರಮಟ್ಟದಲ್ಲಿ ಪದವಿಪೂರ್ವ ವಿದ್ಯಾಲಯವನ್ನು ಪ್ರತಿನಿಧಿಸಿದ ರಕ್ಷಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಸ್ವಾಗತಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಪ್ರಿಯಾಂಕ ವಂದಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಭಕ್ತಿಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.












