Friday, June 27, 2025

ಧರ್ಮ- ಸಂಸ್ಕೃತಿಗೆ ಕಲ್ಲಡ್ಕ ದೊಡ್ಡ ಕೊಡುಗೆ ನೀಡಿದೆ: ಒಡಿಯೂರು ಶ್ರೀ

ಬಂಟ್ವಾಳ: ಸಂಸ್ಕಾರದ ಮೂಲಕ ಸಂಸ್ಕೃತಿಯಲ್ಲಿ ಒಂದಾಗಬೇಕು.‌ ಕೃಷಿ- ಋಷಿ ಗಟ್ಟಿಯಾದರೆ ದೇಶ ಬಲಿಷ್ಠವಾಗುತ್ತದೆ. ಧರ್ಮ- ಸಂಸ್ಕೃತಿಗೆ ಕಲ್ಲಡ್ಕ ದೊಡ್ಡ ಕೊಡುಗೆ ನೀಡಿದೆ. ಜೀವನ ಶಿಕ್ಷಣದ ಅಗತ್ಯತೆ ಇದೆ. ಮಾನವೀಯತೆ ಮರೆಯುದ ಎಚ್ಚರಿಕೆಯ ಬದುಕು ನಮ್ಮದಾಗಬೇಕು ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಪರಮಪೂಜ್ಯ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ-2021 ಬಂಟ್ವಾಳ ತಾಲೂಕು ಇದರ ಕಲ್ಲಡ್ಕ ವಲಯ ಸಮಿತಿ ಹಾಗೂ ಒಡಿಯೂರು ಶ್ರೀಗಳ ಗ್ರಾಮ ವಿಕಾಸ ಯೋಜನೆ ಕಲ್ಲಡ್ಕ ಇದರ ವತಿಯಿಂದ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಸಹಯೋಗದೊಂದಿಗೆ ನಡೆದ ಷಷ್ಠ್ಯಬ್ದ ಸಂಭ್ರಮ ಅಂಗವಾಗಿ ನಡೆದ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಒಡಿಯೂರು ಶ್ರೀಗಳು ಮನುಕುಲದ ಜತೆಗೆ ಗೋಸಂಕುಲಕ್ಕೂ ವಿಶೇಷ ಕೊಡುಗೆಯನ್ನಿತ್ತಿದ್ದಾರೆ. ಈಗಿನ ಸಾಧನೆಗಿಂತ ಮಿಗಿಲಾದ ಸಾಧನೆ ಮಾಡುವ ಶಕ್ತಿಯನ್ನು ದೇವರು ನೀಡಬೇಕು ಎಂಬುದನ್ನು ನಾವು ಪ್ರಾರ್ಥಿಸಬೇಕು ಎಂದರು.

ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಒಡಿಯೂರು ಶ್ರೀ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ಷಷ್ಠ್ಯಬ್ದ ಸಂಭ್ರಮ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ವಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಶೆಟ್ಟಿ ಬೊಂಡಾಲ , ದಿನೇಶ್ ಅಮ್ಟೂರು ವೇದಿಕೆಯಲ್ಲಿದ್ದರು.

ಇನ್ನೊಮೆಕ್ ಟೆಕ್ನಾಲಜೀಸ್ ನ ಬಾಲಸುಬ್ರಹ್ಮಣ್ಯ ಎಚ್.ಎಸ್.ಅವರು ಔಷಧಿ ಸಿಂಪಡಣೆ ಕುರಿತು ಮಾಹಿತಿ- ಪ್ರಾತ್ಯಕ್ಷಿಕೆ ನೀಡಿದರು. ವಿವಿಧ ಸಂಘಗಳಿಂದ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಉದ್ಯೋಗ ನೈಪುಣ್ಯತೆ ಶಿಬಿರದ ಪುಸ್ತಕವನ್ನು ಶ್ರೀಗಳು ಬಿಡುಗಡೆಗೊಳಿಸಿದರು.

ವಲಯ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಅಡ್ಯಂತಾಯ ಸ್ವಾಗತಿಸಿದರು. ಗೋಳ್ತಮಜಲು ಗ್ರಾ.ಪಂ.ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...