Wednesday, July 9, 2025

ಕಲ್ಲಡ್ಕ: ಪಾದಪೂಜೆ ಮತ್ತು ಸಾಮೂಹಿಕ ಹುಟ್ಟುಹಬ್ಬ

ಕಲ್ಲಡ್ಕ: ಶ್ರೀರಾಮ ಶಿಶುಮಂದಿರ ಕಲ್ಲಡ್ಕದಲ್ಲಿ ಮಾತೆಯರ ಪಾದಪೂಜೆ ಮತ್ತು ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ನಡೆಯಿತು. ಮಕ್ಕಳಿಗೆ ತಾಯಂದಿರ ಕೇವಲ ಪಾದಗಳು ಮಾತ್ರ ಕಾಣುವ ರೀತಿಯಲ್ಲಿ ಪರದೆಯನ್ನು ಕಟ್ಟಲಾಗಿತ್ತು. ಪುಟಾಣಿಗಳು ತಮ್ಮ ತಮ್ಮ ಅಮ್ಮನ ಪಾದವನ್ನೇ ನೋಡಿ ಗುರುತಿಸಿ ಅದರ ಪಕ್ಕದಲ್ಲಿ ಕುಳಿತು ಕೊಳ್ಳುತ್ತಿದ್ದರು. ನಂತರ ಪರದೆಯನ್ನು ಬಿಚ್ಚಲಾಗಿತ್ತು. ಎಲ್ಲಾ ಪುಟಾಣಿಗಳು ಅವರ ಅಮ್ಮನ ಪಾದಗಳಿಗೆ ನೀರು ಹಾಕಿ ಅರಶಿನ ಕುಂಕುಮ ಹಚ್ಚಿ ಪುಷ್ಪವನ್ನು ಅರ್ಪಿಸಿ ಪಾದಪೂಜೆ ಮಾಡಿದರು. ಎಲ್ಲಾ ಪುಟಾಣಿಗಳು ಅವರವರ ಅಮ್ಮನ ಪಾದವನ್ನು ಸರಿಯಾಗಿ ಗುರುತಿಸಿದ್ದು ವಿಶೇಷವಾಗಿದೆ. ತುಂಬಾ ಸಂತೋಷದಿಂದ ಮಾತೆಯರು ಹಾಗೂ ಪುಟಾಣಿಗಳು ಈ ಪಾದಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಂತರ ಹುಟ್ಟುಹಬ್ಬ ಆಚರಿಸುವ ಮಕ್ಕಳಿಗೆ ಆರತಿಎತ್ತಿ, ತಿಲಕಇಟ್ಟು, ಅಕ್ಷತೆ ಹಾಕಿ, ಸಿಹಿಯನ್ನು ನೀಡಿ ಮಾತೆಯರು ಶುಭ ಹಾರೈಸಿ 52 ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವಸಂತ ಮಾಧವ , ನಾಗೇಶ್‌ ಕಲ್ಲಡ್ಕ ಹಾಗೂ ಡಾ||ಕಮಲಾ ಭಟ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 141 ಮಾತೆಯರು ಭಾಗವಹಿಸಿದರು.
ಕಾರ್ಯಕ್ರಮವನ್ನು ವಿದ್ಯಾ ಸ್ವಾಗತಿಸಿ, ರೋಹಿಣಿ ಅಶೋಕ್ ವಂದಿಸಿ,  ಪರಿಮಳ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...