Tuesday, January 27, 2026

ಕಲ್ಲಡ್ಕ: ಪಾದಪೂಜೆ ಮತ್ತು ಸಾಮೂಹಿಕ ಹುಟ್ಟುಹಬ್ಬ

ಕಲ್ಲಡ್ಕ: ಶ್ರೀರಾಮ ಶಿಶುಮಂದಿರ ಕಲ್ಲಡ್ಕದಲ್ಲಿ ಮಾತೆಯರ ಪಾದಪೂಜೆ ಮತ್ತು ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ನಡೆಯಿತು. ಮಕ್ಕಳಿಗೆ ತಾಯಂದಿರ ಕೇವಲ ಪಾದಗಳು ಮಾತ್ರ ಕಾಣುವ ರೀತಿಯಲ್ಲಿ ಪರದೆಯನ್ನು ಕಟ್ಟಲಾಗಿತ್ತು. ಪುಟಾಣಿಗಳು ತಮ್ಮ ತಮ್ಮ ಅಮ್ಮನ ಪಾದವನ್ನೇ ನೋಡಿ ಗುರುತಿಸಿ ಅದರ ಪಕ್ಕದಲ್ಲಿ ಕುಳಿತು ಕೊಳ್ಳುತ್ತಿದ್ದರು. ನಂತರ ಪರದೆಯನ್ನು ಬಿಚ್ಚಲಾಗಿತ್ತು. ಎಲ್ಲಾ ಪುಟಾಣಿಗಳು ಅವರ ಅಮ್ಮನ ಪಾದಗಳಿಗೆ ನೀರು ಹಾಕಿ ಅರಶಿನ ಕುಂಕುಮ ಹಚ್ಚಿ ಪುಷ್ಪವನ್ನು ಅರ್ಪಿಸಿ ಪಾದಪೂಜೆ ಮಾಡಿದರು. ಎಲ್ಲಾ ಪುಟಾಣಿಗಳು ಅವರವರ ಅಮ್ಮನ ಪಾದವನ್ನು ಸರಿಯಾಗಿ ಗುರುತಿಸಿದ್ದು ವಿಶೇಷವಾಗಿದೆ. ತುಂಬಾ ಸಂತೋಷದಿಂದ ಮಾತೆಯರು ಹಾಗೂ ಪುಟಾಣಿಗಳು ಈ ಪಾದಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಂತರ ಹುಟ್ಟುಹಬ್ಬ ಆಚರಿಸುವ ಮಕ್ಕಳಿಗೆ ಆರತಿಎತ್ತಿ, ತಿಲಕಇಟ್ಟು, ಅಕ್ಷತೆ ಹಾಕಿ, ಸಿಹಿಯನ್ನು ನೀಡಿ ಮಾತೆಯರು ಶುಭ ಹಾರೈಸಿ 52 ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವಸಂತ ಮಾಧವ , ನಾಗೇಶ್‌ ಕಲ್ಲಡ್ಕ ಹಾಗೂ ಡಾ||ಕಮಲಾ ಭಟ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 141 ಮಾತೆಯರು ಭಾಗವಹಿಸಿದರು.
ಕಾರ್ಯಕ್ರಮವನ್ನು ವಿದ್ಯಾ ಸ್ವಾಗತಿಸಿ, ರೋಹಿಣಿ ಅಶೋಕ್ ವಂದಿಸಿ,  ಪರಿಮಳ ನಿರೂಪಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...