Monday, January 26, 2026

ಕಲ್ಲಡ್ಕದಲ್ಲಿ ಸಾರ್ವಜನಿಕ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಶುಚಿಮಾಡುವ ಪೋಲೀಸ್ ತಂಡ

ಬಂಟ್ವಾಳ: ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕ್ಲೀನ್ ಮಾಡಲು ಸೈ ಎಂದು ತೋರಿಸಿದ ಬಂಟ್ವಾಳ ಟ್ರಾಫಿಕ್ ಎ.ಎಸ್. ಐ.ವಿಜಯ ಕುಮಾರ್ ತಂಡ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ದೂಳು ಕೆಸರಿನಿಂದ ಕೂಡಿದ್ದ ಕಲ್ಲಡ್ಕ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ನೀರು ಹಾಕಿ ತೊಳೆಯುವ ಪೋಲೀಸರ ತಂಡ.

ಕಲ್ಲಡ್ಕದ ಸಿ.ಟಿ.ಯಲ್ಲಿರುವ ಬಸ್ ನಿಲ್ದಾಣ ಇತ್ತೀಚೆಗೆ ದೂಳು ಹಾಗೂ ಕೆಸರಿನಿಂದ ಕೂಡಿದ್ದು,ಸಾರ್ವಜನಿಕ ರು ಬಸ್ ನಿಲ್ದಾಣದೊಳಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ.

ಅದನ್ನು ಮನಗಂಡು ಟ್ರಾಫಿಕ್ ಎ‌ಎಸ್ಐ ವಿಜಯ ಕುಮಾರ್ ಅವರ ನೇತೃತ್ವದ ಎ.ಎಸ್.ಐ.ದೇವಪ್ಪ, ಹಾಗೂ ಕೆ.ಎಸ್.ಆರ್.ಪಿ.ತಂಡ ಪ್ರತಿ ವಾರಕ್ಕೊಮ್ಮೆ ಕ್ಲೀನಿಂಗ್ ಮಾಡುತ್ತಿದ್ದಾರೆ.‌‌ಪೋಲೀಸರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಬಾರೀ ಪ್ರಶಂಸೆ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ‌ಸ್ವಚ್ಚತೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆಯಾದರೂ ಯೋಜನೆಯನ್ನು ‌ಪರಿಣಾಮಕಾರಿಯಾಗಿ ಜಾರಿ‌ಮಾಡಬೇಕಾದ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ, ಹಾಗಾಗಿ ಪೋಲೀಸ್ ತಂಡ , ಇತರ ಸಂಘ ಸಂಸ್ಥೆಗಳು ಸ್ವಚ್ಚತೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...