ಕಲ್ಲಡ್ಕ ಶ್ರೀರಾಮಮಂದಿರದ ಶ್ರೀರಾಮಾಂಜನೇಯ ವಿಶ್ವಸ್ಥ ಮಂಡಳಿಯ ಆಶ್ರಯದಲ್ಲಿ 90 ನೇ ವರ್ಷದ ಮೊಸರುಕುಡಿಕೆ ಉತ್ಸವ ಹಾಗೂ ಆಕರ್ಷಕ ಶೋಭಾಯಾತ್ರೆ ಕಲ್ಲಡ್ಕದಲ್ಲಿ ಶುಕ್ರವಾರ ನಡೆಯಿತು.





ಶ್ರೀಕೃಷ್ಣನ ಶೋಭಾಯಾತ್ರೆ ಶ್ರೀರಾಮ ಮಂದಿರದಿಂದ ಹೊರಟು ಕಲ್ಲಡ್ಕ ಪೇಟೆಯಲ್ಲಿ ಸಂಚರಿಸಿ ಕೆ.ಸಿ. ರೋಡ್ ಮೂಲಕ ಸಾಗಿ ಬಂದು ಮಂದಿರದಲ್ಲಿ ಸಮಾಪನಗೊಂಡಿತು.ಶಿಲ್ಪಾಗೊಂಬೆ ಬಳಗ, ತ್ರಿಶೂಲ್ ಫ್ರೆಂಡ್ಸ್ ಕಲ್ಲಡ್ಕ, ಓಂ.ಶಕ್ತಿ ಫ್ರೆಂಡ್ಸ್ ಕಲ್ಲಡ್ಕ ಮೊದಲಾದಸ್ತಬ್ಧ ಚಿತ್ರಗಳು, ವ ಗಮನ ಸೆಳೆದವು. ಶ್ರೀರಾಮ ಶಿಶು ಮಂದಿರ ಮತ್ತು ಪ್ರಾಥಮಿಕ ಶಾಲೆಯ ಪುಟಾಣಿಗಳು ಬಾಲಕೃಷ್ಣ ಪಾತ್ರಧಾರಿಗಳಾಗಿ ಪಾಲ್ಗೊಂಡಿದ್ದರು.
ಶ್ರೀ ರಾಮಾಂಜನೇಯ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಕಲ್ಲಡ್ಕ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ, ಮಾಜಿ ಶಾಸಕರಾದ ಎ.ರುಕ್ಕಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಆರ್.ಚೆನ್ನಪ್ಪ ಕೋಟ್ಯಾನ್, ಸುಲೋಚನಾ ಜಿ.ಕೆ. ಭಟ್, ಕ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ, ಬಿ.ನಾರಾಯಣ ಸೋಮಯಾಜಿ, ವಸಂತ ಮಾಧವ, ಯತಿನ್ ಕುಮಾರ್, ಪುಷ್ಪರಾಜ್ ಶೆಟ್ಟಿಗಾರ್, ಉತ್ತಮ್ ಕುಮಾರ್ ಪಳನೀರು, ಹರೀಶ್ ಆಚಾರ್ಯ, ದಿನೇಶ್ ಅಮ್ಮೂರು, ಬೊಂಡಾಲ ಜನಾರ್ದನ ಕುಲಾಲ್, ಚಿತ್ತರಂಜನ್ ಹೊಸಕಟ್ಟ, ಮೋನಪ್ಪ ದೇವಸ್ಯ, ವಜ್ರನಾಥ ಕಲ್ಲಡ್ಕ ಸಹಿತ ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಂಡರು.












