Monday, February 10, 2025

ಕಲ್ಲಡ್ಕ ರೈ.ಸೇ.ಸ.ಸಂಘಕ್ಕೆ ಆಯ್ಕೆ

ಬಂಟ್ವಾಳ: ಕಲ್ಲಡ್ಕರೈತರ ಸೇವಾ ಸಹಕಾರ ಸಂಘ ನಿಯಮಿತ ಕಲ್ಲಡ್ಕ ಇದರ 2019-2024 ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ಗುರುವಾರ ಸಂಘದ ಮುಖ್ಯಕಛೇರಿಯಲ್ಲಿ  ನಡೆದಿದ್ದು,  ನೂತನ ಅಧ್ಯಕ್ಷರಾಗಿ ಸಹಕಾರ ಭಾರತಿಯ ಬೆಂಬಲಿತ,  ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಪುನರಾಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ  ಬಿ. ಸುಧಾಕರರೈ ಬೋಳಂತೂರು ರವರು ಸರ್ವಾನುಮತದಿಂದ ಅಯ್ಕೆಯಾಗಿದ್ದಾರೆ.   ಸಂಘದ ನಿರ್ದೇಶಕರಾಗಿ  ಪೂವಪ್ಪಗೌಡ, ಗಿರಿಯಪ್ಪಗೌಡ, ವೆಂಕಟ್ರಾಯ ಪ್ರಭು, ಲೋಕಾನಂದ,  ಸುರೇಶ್ ಶೆಟ್ಟಿ,  ಚಂದ್ರಶೇಖರಟೈಲರ್,  ಮಹಾಬಲ ಸಾಲ್ಯಾನ್, ಕೊರಗಪ್ಪ ನಾಯ್ಕ, ನೋಣಯ್ಯಎಂ.ಅರ್,  ಅರುಣ ಭಟ್,  ವಿಜಯರವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.  ಚುನಾವಣಾಧಿಕಾರಿಯಾಗಿ  ಬಿ. ನಾಗೇಂದ್ರರವರು ಕಾರ್ಯನಿರ್ವಹಿಸಿದರು. ಸಂಘದ ಅಧ್ಯಕ್ಷ ಕೆ.ಪದ್ಮನಾಭಕೊಟ್ಟಾರಿಯವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿಗೆ ಸಹಕರಿಸಿದ ಸಂಘದ ಸದಸ್ಯ ಮತದಾರರಿಗೆಕೃತಜ್ಞತೆ ಸಲ್ಲಿಸಿದರು.  ಹಾಗೂ ಗೆಲುವಿಗೆ ಸಹಕರಿಸಿದ ಬಿಜೆಪಿ ಮತ್ತು ಸಹಕಾರ ಭಾರತಿಯಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗಕ್ಕೆ  ಕೃತಜ್ಞತೆ ಸಲ್ಲಿಸಿದರು.  ಈ ಸಂದರ್ಭದಲ್ಲಿಬಂಟ್ವಾಳ ಎ.ಪಿ.ಎಂ.ಸಿ ಸದಸ್ಯರಾದ ಬಿ.ನೇಮಿರಾಜರೈ ಬೋಳಂತೂರು, ವಿಟ್ಲಗ್ರಾಮೀಣ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಎಂ. ತಾಲೂಕು ಪಂಚಾಯತ್ ಸದಸ್ಯ ಮಹಾಬಲ ಆಳ್ವ, ಗೋಳ್ತಮಜಲು ಗ್ರಾಮ ಪಂಚಾಯತ್‌ಅಧ್ಯಕ್ಷೆ  ಜಯಲಕ್ಷ್ಮೀ, ಬಾಳ್ತಿಲ ಗ್ರಾಮ ಪಂಚಾಯತ್‌ಅಧ್ಯಕ್ಷ ವಿಠಲ ನಾಯ್ಕ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ.ಕೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...