Wednesday, February 12, 2025

ಸಮಾಜದ ಪರಿವರ್ತನೆಯ ಕಾರ್ಯ ಶಿಕ್ಷಕನಿಂದ ಸಾಧ್ಯ- ಡಾ. ಪ್ರಭಾಕರ ಭಟ್

ಬಂಟ್ವಾಳ : ರಾಷ್ಟ್ರದ ರಕ್ಷಣೆಗೆ ಸೈನಿಕರು, ಪೋಲೀಸರು ಶ್ರಮಿಸಿದರೆ, ರಾಷ್ಟ್ರದ ಪೋಷಣೆಯ ಕಾರ್ಯವನ್ನು ಶಿಕ್ಷಕರು ಮಾಡುವರು. ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಕನಿಂದ ಮಾತ್ರ ಸಾಧ್ಯ. ಸಮಾಜದ ಪರಿವರ್ತನೆಯ ಕಾರ್ಯದಲ್ಲಿ ನಿಂತಿರುವುದು ಶಿಕ್ಷಣ ಕ್ಷೇತ್ರ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ತಿಳಿಸಿದರು. ಅವರು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಭವಿಷ್ಯದ ಶಿಕ್ಷಕರನ್ನು ರೂಪಿಸುವ ಮೂರು ದಿನಗಳ ಕಾಲ ನಡೆದ ’ಭವಿಷ್ ಘಟಕ’ದ ಪ್ರೇರಣಾ ಶಿಬಿರದ ಸಮಾರೋಪ ಭಾಷಣವನ್ನು ಮಾಡುತ್ತಾ ಹೀಗೆ ನುಡಿದರು
ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ ಇದರ ಕೋಶಾಧಿಕಾರಿ ರಾಮ್‌ಪ್ರಸಾದ್ ಕರಿಯಾಲ ಇವರು ಶಿಕ್ಷಕನ ಒಳ್ಳೆಯ ಚಿಂತನೆಯಿಂದ ಆರೋಗ್ಯವಂತ ಸ್ವಸ್ಥ ಸಮಾಜ ನಿರ್ಮಾಣವಾಗುವುದು. ನಮ್ಮ ಹಿರಿಯರ ಆದರ್ಶ, ಗೌರವಕ್ಕೆ ಚ್ಯುತಿ ಬಾರದಂತೆ ನೀತಿಗಳನ್ನು ಮಕ್ಕಳಲ್ಲಿ ಬೆಳೆಸುವವನೇ ಶಿಕ್ಷಕ ಎಂದರು.
ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಸಹ ಸಂಚಾಲಕರಾದ ರಮೇಶ್ ಯನ್. ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗಣಪತಿ ಹೆಗಡೆ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕಿ ಶುಭಲತಾ ಕಾರ್ಯಕ್ರಮದ ವರದಿ ಮಂಡಿಸಿದರು.
ಕಾಲೇಜಿನ ದಶಮಾನೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಈ ಶಿಬಿರದಲ್ಲಿ ಒಟ್ಟು 41 ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶಿಬಿರಾರ್ಥಿಯರಾದ ಶ್ರೇಯಶ್ರೀ ಸ್ವಾಗತಿಸಿ, ದೀಕ್ಷಿತಾ ವಂದಿಸಿ, ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...