Saturday, July 12, 2025

ಸಮಾಜದ ಪರಿವರ್ತನೆಯ ಕಾರ್ಯ ಶಿಕ್ಷಕನಿಂದ ಸಾಧ್ಯ- ಡಾ. ಪ್ರಭಾಕರ ಭಟ್

ಬಂಟ್ವಾಳ : ರಾಷ್ಟ್ರದ ರಕ್ಷಣೆಗೆ ಸೈನಿಕರು, ಪೋಲೀಸರು ಶ್ರಮಿಸಿದರೆ, ರಾಷ್ಟ್ರದ ಪೋಷಣೆಯ ಕಾರ್ಯವನ್ನು ಶಿಕ್ಷಕರು ಮಾಡುವರು. ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಕನಿಂದ ಮಾತ್ರ ಸಾಧ್ಯ. ಸಮಾಜದ ಪರಿವರ್ತನೆಯ ಕಾರ್ಯದಲ್ಲಿ ನಿಂತಿರುವುದು ಶಿಕ್ಷಣ ಕ್ಷೇತ್ರ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ತಿಳಿಸಿದರು. ಅವರು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಭವಿಷ್ಯದ ಶಿಕ್ಷಕರನ್ನು ರೂಪಿಸುವ ಮೂರು ದಿನಗಳ ಕಾಲ ನಡೆದ ’ಭವಿಷ್ ಘಟಕ’ದ ಪ್ರೇರಣಾ ಶಿಬಿರದ ಸಮಾರೋಪ ಭಾಷಣವನ್ನು ಮಾಡುತ್ತಾ ಹೀಗೆ ನುಡಿದರು
ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ ಇದರ ಕೋಶಾಧಿಕಾರಿ ರಾಮ್‌ಪ್ರಸಾದ್ ಕರಿಯಾಲ ಇವರು ಶಿಕ್ಷಕನ ಒಳ್ಳೆಯ ಚಿಂತನೆಯಿಂದ ಆರೋಗ್ಯವಂತ ಸ್ವಸ್ಥ ಸಮಾಜ ನಿರ್ಮಾಣವಾಗುವುದು. ನಮ್ಮ ಹಿರಿಯರ ಆದರ್ಶ, ಗೌರವಕ್ಕೆ ಚ್ಯುತಿ ಬಾರದಂತೆ ನೀತಿಗಳನ್ನು ಮಕ್ಕಳಲ್ಲಿ ಬೆಳೆಸುವವನೇ ಶಿಕ್ಷಕ ಎಂದರು.
ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಸಹ ಸಂಚಾಲಕರಾದ ರಮೇಶ್ ಯನ್. ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗಣಪತಿ ಹೆಗಡೆ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕಿ ಶುಭಲತಾ ಕಾರ್ಯಕ್ರಮದ ವರದಿ ಮಂಡಿಸಿದರು.
ಕಾಲೇಜಿನ ದಶಮಾನೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಈ ಶಿಬಿರದಲ್ಲಿ ಒಟ್ಟು 41 ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶಿಬಿರಾರ್ಥಿಯರಾದ ಶ್ರೇಯಶ್ರೀ ಸ್ವಾಗತಿಸಿ, ದೀಕ್ಷಿತಾ ವಂದಿಸಿ, ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...