Tuesday, January 27, 2026

ಶಾಲಾ ಸಂಸತ್ತು ಉದ್ಘಾಟನೆ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇದರ ಶೈಕ್ಷಣಿಕ ವರ್ಷ 2019-20 ನೇ ಸಾಲಿನ ಶಾಲಾ ಸಂಸತ್ತು ಅಧಿವೇಶನ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್‍ಯಕ್ರಮವು ಜು.11ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಅಗ್ನಿ ಹೋತ್ರ ಹಾಗೂ ಸರಸ್ವತಿ ವಂದನೆ ಮೂಲಕ ಆರಂಭಿಸಲಾಯಿತು.
ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷರು, ಎಸ್.ಸಿ – ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷರಾದ ದಿನೇಶ್ ಅಮ್ಟೂರು ಮಾತನಾಡಿ ಭಾರತ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನ ಪಾತ್ರ ಬಹುಮುಖ್ಯ. ಸಂವಿಧಾನವೆಂಬುದು ದೇಶದ ಧರ್ಮಗ್ರಂಥ. ನಾಯಕತ್ವದ ಅರಿವು ಮೂಡಿಸಲು ಈ ಶಾಲಾ ಸಂಸತ್ತು ರಚನೆಯಾಗುತ್ತದೆ. ಶಾಲೆಯು, ವಿದ್ಯಾರ್ಥಿಗಳಲ್ಲಿ ನಾಯಕತ್ವವನ್ನು ಬೆಳೆಸುವ ಕೊಂಡಿಯಾಗಿದೆ. ಈ ಕೊಂಡಿಗಳು ಕಲ್ಲಡ್ಕದಿಂದ ಹಿಡಿದು ಎಲ್ಲಾ ರಾಜ್ಯ ರಾಷ್ಟ್ರಗಳಲ್ಲಿ ಹೊರಹೊಮ್ಮುವಂತಾಗಲಿ ಎಂದು ತನ್ನ ಶಾಲಾ ದಿನವನ್ನು ನೆನಪಿಸುತ್ತಾ ಶುಭಹಾರೈಸಿದರು.

ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ರಾಜೇಶ್ವರಿ ಪ್ರಮಾಣವಚನವನ್ನು ಬೋಧಿಸಿದರು. ನಂತರ ವಿವಿಧ ಸಂಘಗಳ ಉದ್ಘಾಟನೆಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠ್ಠಲ್ ನಾಯ್ಕ್ ನೆರವೇರಿಸಿದರು.
ಶಾಲಾ ನಾಯಕನಾಗಿ 7ನೇ ತರಗತಿಯ ದೀಕ್ಷಿತ್, ಗೃಹಮಂತ್ರಿಯಾಗಿ ಶ್ರಮಿಕಾ, ಕೃಷಿ ಸಚಿವರಾಗಿ ಶ್ರೀಜನ್ಯ ಹಾಗೂ ಹೇಮಂತ್, ನೀರಾವರಿ ಸಚಿವರಾಗಿ ಭುವನ್, ಸಾಂಸ್ಕೃತಿಕ ಮಂತ್ರಿಯಾಗಿ ಮನಸ್ವಿ ಹಾಗೂ ನಿಖಿತಾ, ಕ್ರೀಡಾಮಂತ್ರಿಯಾಗಿ ರೋಹಿತ್, ಆರೋಗ್ಯಮಂತ್ರಿಯಾಗಿ ತ್ರಿಶಾ ಅತಿಕಾರಿ, ಸ್ವಚ್ಛತಾ ಮಂತ್ರಿಯಾಗಿ ಜೀವಿತ್ ಮತ್ತು ಧನುಷ್, ಶಿಕ್ಷಣ ಮಂತ್ರಿಯಾಗಿ ಶ್ರೀನಿವಾಸ ಮತ್ತು ಅನನ್ಯ, ವಾರ್ತಾಸಚಿವರಾಗಿ ತಿಲಕ್ ಮತ್ತು ಅನುಷಾ, ಸಭಾಪತಿಯಾಗಿ ಕುಶಿ ಪೂಜಾರಿ, ವಿರೋಧ ಪಕ್ಷದ ನಾಯಕನಾಗಿ ಕೆ.ಧನುಷ್ ಕೆ ಜಿ ಮಾಸ್ಟರ್ ಇವರು ಪ್ರಮಾಣವಚನ ಸ್ವೀಕರಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಲಕ್ಷ್ಮೀಗೋಪಾಲಾಚಾರ್, ಕುಲ್ಯಾರು ನಾರಾಯಣ ಶೆಟ್ಟಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠ್ಠಲ್ ನಾಯ್ಕ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಸುಧನ್ವ ಶಾಸ್ತ್ರೀ ಹಾಗೂ ಶಾಲಾ ಮುಖ್ಯಶಿಕ್ಷಕರಾದ ರವಿರಾಜ್ ಕಣಂತೂರು ಉಪಸ್ಥಿತಿಯಿದ್ದರು.
ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ಸುಮಂತ್ ಆಳ್ವ ನಿರೂಪಿಸಿ, ವೇದಾವತಿ ಸ್ವಾಗತಿಸಿ ರೇಷ್ಮಾ ವಂದಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...