Saturday, July 12, 2025

ರಾಷ್ಟ್ರೀಯ ಸೇವಾಯೋಜನೆಯ ಸ್ಥಾಪನಾ ದಿನಾಚರಣೆ

ಬಂಟ್ವಾಳ : ಪ್ರತಿಫಲಾಪೇಕ್ಷೆ ಇಲ್ಲದೆ ಸಹಜಭಾವದಿಂದ ಮಾಡುವ ಸೇವೆಯೇ ನಿಜವಾದ ಸೇವೆ. ದೇಶದ ಮಾನವೀಯ ಆಧಾರಸ್ಥಂಭವು ಸೇವೆ ಮತ್ತು ತ್ಯಾಗ. ಸೇವೆಯನ್ನು ಜೀವನದ ಹವ್ಯಾಸ ಮತ್ತು ಮನೋಭಾವದಿಂದ ಬೆಳೆಸಿದರೆ ಉತ್ತಮ ವ್ಯಕ್ತಿತ್ವ ನಿರ್ಮಾಣ ವಾಗುವುದು. ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರ ಮನಸ್ಸು ವಿಶಾಲವಾಗಿದ್ದು, ಕಿವಿ ಸದಾ ಸಮಾಜದ ಸೇವೆಗಾಗಿ ತೆರೆದಿರಬೇಕು ಎಂದು ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ ಪ್ರಾಧ್ಯಾಪಕ ವಿನೋದ್ ಶೆಟ್ಟಿ ನುಡಿದರು.


ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇದರ ರಾಷ್ಟ್ರೀಯ ಸೇವಾಯೋಜನೆಯ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೇವೆ-ಭಾರತೀಯ ಪರಿಕಲ್ಪನೆ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕ ವಸಂತ ಮಾಧವ ವಹಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕನ್ನಡ ಉಪನ್ಯಾಸಕ ಯತಿರಾಜ್, ಯೋಜನಾಧಿಕಾರಿಯಾದ ಹರೀಶ್, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಶೇಷವಾಗಿ ತನ್ನ ಜೀವನವನ್ನು ಸಮಾಜದ ಸೇವೆಗೆ ಮುಡಿಪಾಗಿಟ್ಟ ವ್ಯಕ್ತಿತ್ವದ ಪರಿಚಯ ಮತ್ತು ಮಾಹಿತಿಯನ್ನು ದೃಶ್ಯ ಮಾಧ್ಯಮದ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಲಾಯಿತು.

ಕಾರ್ಯಕ್ರಮವನ್ನು ಹಿತೇಶ್ ಪ್ರಥಮ ಬಿ.ಕಾಂ ಸ್ವಾಗತಿಸಿ, ಹರ್ಷಿತಾ ಪ್ರಥಮ ಬಿ.ಕಾಂ ವಂದಿಸಿ, ಧನ್ಯಶ್ರೀ ಪ್ರಥಮ ಬಿ.ಕಾಂ ಇವರು ನಿರೂಪಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...