ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಪದವಿ ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮೀ ಇವರು ಮಾತನಾಡಿ, ವಿದ್ಯಾವಂತರಲ್ಲಿ ಮತದಾನದ ಅರಿವನ್ನು ಮೂಡಿಸಿ ಅದರ ಪ್ರಾಮುಖ್ಯತೆಯನ್ನು ಎಲ್ಲಾ ಅವಿದ್ಯಾವಂತರಲ್ಲಿ ತಿಳಿಯುವಂತೆ ಮಾಡುವುದೇ ಈ ದಿನದ ನಿಜವಾದ ಆಚರಣೆ ಎಂದರು.
ಈ ಸಂದರ್ಭದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಂದ ಮಾಸಿಕ ಭಜನಾ ಕಾರ್ಯಕ್ರಮದ ಜೊತೆಗೆ ಸಾಮೂಹಿಕ ಹುಟ್ಟುಹಬ್ಬ ಆಚರಿಸಲಾಯಿತು. ಪದವಿ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ಕಟ್ಟೆ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ ವಿಘ್ನೇಶ್ ರೈ ಕಾರ್ಯಕ್ರಮ ನಿರ್ವಹಿಸಿದರು.
