Wednesday, July 9, 2025

ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್‌ನಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಪುತ್ತೂರು ತೆಂಕಿಲದ ಆವರಣದಲ್ಲಿ ನವೆಂಬರ್ ೩೦30 ಮತ್ತು ಡಿಸೆಂಬರ್ 1ರಂದು ನಡೆದ ’ಅನ್ವೇಷಣಾ-2019’ ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟನಲ್ಲಿ ಶ್ರೀರಾಮ ಪ್ರೌಢ ಶಾಲೆಯಿಂದ 24, ಶ್ರೀರಾಮ ಪ್ರಾಥಮಿಕ ವಿಭಾಗದಿಂದ 17 ಹಾಗೂ ಪಿ.ಯು.ಸಿ ವಿಭಾಗದಿಂದ 6 ವಿದ್ಯಾರ್ಥಿಗಳು ಒಟ್ಟು 28 ಮಾದರಿಗಳನ್ನು ವಿವಿಧ ವಿಭಾಗಗಳಲ್ಲಿ ಪ್ರದರ್ಶಿಸಿರುತ್ತಾರೆ.


ಹೊಸ ಬಗೆಯ ಕೃಷಿ ಯಂತ್ರೋಪಕರಣಗಳಲ್ಲಿ ಪಶುಸಂಗೋಪನೆಗೆ ಸಹಾಯವಾಗುವ ದನಗಳಿಗೆ ಹಸಿ ಹುಲ್ಲನ್ನು ಕೆತ್ತುವ ಯಂತ್ರದ ಮಾದರಿಯನ್ನು ತಯಾರಿಸಿ ಜೂನಿಯರ್ ವಿಭಾಗದಲ್ಲಿ 9ನೇ ತರಗತಿಯ ರಂಜಿತ್ ಮತ್ತು ಸಬ್ ಜೂನಿಯರ್ ವಿಭಾಗದಲ್ಲಿ 7ನೇ ತರಗತಿಯ ಖುಷಿ ಮತ್ತು ಚಿನ್ಮಯಿ ತಯಾರಿಸಿರುವ ’ಸ್ಮಾರ್ಟ್ ಶೆಡ್’ ಮಾದರಿಯಲ್ಲಿ ದನದ ಕೊಟ್ಟಿಗೆಯಲ್ಲಿ ಸ್ವಯಂಚಾಲಿತ ಯಂತ್ರದ ಸಹಾಯದಿಂದ ಸಮಯಕ್ಕೆ ಸರಿಯಾಗಿ ದನಗಳಿಗೆ ಮೇವನ್ನು ಒದಗಿಸುವ ಮಾದರಿಯು ಪ್ರಥಮ ಬಹುಮಾನವನ್ನು ಪಡೆದಿರುತ್ತದೆ.
ಹಾಗೂ 8 ನೇ ತರಗತಿಯ ವಿಘ್ನೇಶ್ ಮತ್ತು ಚರಿತ್ ಮಳೆ ಸಂವೇಧಿ ಸೂಚಕವನ್ನು ಬಳಸಿ ತಯಾರಿಸಲಾದ ’ರೂಫ್ ಕಂಟ್ರೋಲ್ಡ್ ಅರೆಕಾ ಡ್ರೈಯರ್’ ಮಾದರಿಯು ಲಘು ಉದ್ಯೋಗ ಭಾರತಿ ಸಂಸ್ಥೆಯ ಕಡೆಯಿಂದ ಮೆಂಟರ್‌ಶಿಪ್ ಮಾನ್ಯತೆಯನ್ನು ಪಡೆದಿದೆ.
ಸಾರ್ವಜನಿಕ ವಿಭಾಗದಲ್ಲಿ ಕೃಷಿಯಲ್ಲಿ ಹೊಸ ಅವಿಷ್ಕಾರಗಳ ವಿಭಾಗದಲ್ಲಿ ಸಂಸ್ಥೆಯ ಶಿಕ್ಷಕಿ ಗಾಯತ್ರಿ ಮಾತಾಜಿ ಇವರು ಬಾಳೆಗೊನೆಯನ್ನು ಪ್ರಾಣಿಗಳಿಂದ ಸಂರಕ್ಷಿಸುವ ಮಾದರಿಯನ್ನು ಪ್ರದರ್ಶಿಸಿ ಜನಮನ್ನಣೆ ಮತ್ತು ಬೇಡಿಕೆಯನ್ನು ಪಡೆದಿರುತ್ತಾರೆ.
ಮಕ್ಕಳಲ್ಲಿನ ಸೃಜನಾತ್ಮಕ ಶಕ್ತಿಗೆ ನಾವೀನ್ಯ ರೂಪ ಕೊಡಲು ಶ್ರೀರಾಮ ವಿದ್ಯಾಕೇಂದ್ರದ ’ಅಟಲ್ ಟಿಂಕರಿಂಗ್ ಲ್ಯಾಬ್’ ನಿರಂತರವಾಗಿ ಸಹಕಾರ ಒದಗಿಸುತ್ತದೆ.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...