Thursday, June 26, 2025

ಕಲ್ಲಡ್ಕ: ಜ್ಞಾನವಿಕಾಸ ಸದಸ್ಯರಿಗೆ ಮಾಸ್ಕ್ ವಿತರಣೆ ಹಾಗೂ ಕೋವಿಡ್ -19 ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ವಿಟ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ಹಾಗೂ ಕಲ್ಲಡ್ಕ ಜಾನ್ಸಿ ರಾಣಿ ಲಕ್ಷ್ಮೀ ಮಹಿಳಾ ಮಂಡಳಿ (ರಿ) ಇವರ ಸಹಯೋಗದಲ್ಲಿ ಜ್ಞಾನವಿಕಾಸ ಸದಸ್ಯರಿಗೆ ಮಾಸ್ಕ್ ವಿತರಣೆ ಹಾಗೂ ಕೋವಿಡ್ -19 ಬಗ್ಗೆ ಮಾಹಿತಿ ಕಾರ್ಯಕ್ರಮ ನೇತಾಜಿ ಯುವಕ ಮಂಡಲ ಕಲ್ಲಡ್ಕದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ವಿಟ್ಲ ಯೋಜನಾ ಕಚೇರಿ ಯೋಜನಾಧಿಕಾರಿ ಮೋಹನ್ ಕೆ. ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ವೀರೇಶ್ ಅವರು ಕೋವಿಡ್ 19 ಬಗ್ಗೆ ಹಾಗೂ ಡೆಂಗ್ಯೂ ಜ್ವರದ ಬಗ್ಗೆ  ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನ್ಸಿ ರಾಣಿ ಲಕ್ಷ್ಮೀ ಮಹಿಳಾ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ಆರ್. ಪೂಜಾರಿ ವಹಿಸಿ, 50 ಮಂದಿ ಸದಸ್ಯರಿಗೆ ಉಚಿತ ಮಾಸ್ಕ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಳಿನಾಕ್ಷಿ ಶೆಟ್ಟಿ, ಮೇಲ್ವಿಚಾರಕಿ ಪ್ರೇಮ, ಸೇವಾ ಪ್ರತಿನಿಧಿ ಎವ್ಲೀನ್, ಒಕ್ಕೂಟದ ಉಪಾಧ್ಯಕ್ಷೆ ಅರುಣಾಕ್ಷಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...