Wednesday, February 4, 2026

ಡಾ| ಕಲ್ಲಡ್ಕ ಪ್ರಭಾಕರ್ ಭಟ್ : ಎರ್ಮಾಳ್ ಹರೀಶ್ ಗುರುಭ್ಯೋ ನಮಃ

ಮುಂಬಯಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಣಿ ಸದಸ್ಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಇಂದು ಮುಂಬಯಿ ಮಹಾನಗರದ ಹೆಸರಾಂತ ಸಂಘಟಕ, ಸಮಾಜ ಸೇವಕ, ಉತ್ತರ ಮುಂಬಯಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಗೋಪಾಲ್ ಶೆಟ್ಟಿ (ಸಂಸದ), ತುಳು ಕನ್ನಡಿಗರ ಅಭಿಮಾನಿ ಬಳಗ ಮುಂಬಯಿ ಇದರ ಸಂಚಾಲಕ ಎರ್ಮಾಳ್ ಹರೀಶ್ ಶೆಟ್ಟಿ ಭೇಟಿ ನೀಡಿ ಗುರುವಂದನೆ ಸಲ್ಲಿಸಿದರು.

 

ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್ ಕಲ್ಲಡ್ಕ ಇಲ್ಲಿನ ರಾಜೇಂದ್ರ ಸೌಧಕ್ಕೆ ಭೇಟಿ ನೀಡಿದ ಹರೀಶ್ ಶೆಟ್ಟಿ ಅವರು ಡಾ| ಪ್ರಭಾಕರ್ ಭಟ್ ಜೊತೆ ಕೊರೋನ ಮಹಾಮಾರಿಯ ಸಂಧಿಗ್ಧ ಪರಿಸ್ಥಿತಿಯಲ್ಲಿ ಭಾರತೀಯರ ಜೀವನ, ವ್ಯಾಪಾರ ವಹಿವಾಟು ಮತ್ತು ಜೀವನೋಪಾಯದ ಭವಿಷ್ಯತ್ತಿನ ನಡೆ ಇತ್ಯಾದಿ ವಿಷಯಗಳೊಂದಿಗೆ ಕುಶಲೋಪರಿ ನಡೆಸಿದರು.

ಜಾಗತಿಕವಾಗಿ ಪಸರಿಸಿದ್ದ ಕೋವಿಡ್ ಸಾಂಕ್ರಮಿಕ ರೋಗದಿಂದಾಗಿ ಕಳೆದ ಸುಮಾರು ಮೂರುವರೆ ತಿಂಗಳಿಂದ ದೇಶ-ವಿದೇಶಗಳಲ್ಲಿ (ವಿಶೇಷವಾಗಿ ಮುಂಬಯಿನಲ್ಲಿ) ಸಿಲುಕಿ ತೊಂದರೆಗೆ ಒಳಗಾಗಿದ್ದ ಅನಿವಾಸಿ ಕನ್ನಡಿಗರನ್ನು ತವರೂರ ತಮ್ಮತಮ್ಮ ಮನೆಗೆ (ತವರು ಮನೆಗೆ) ಕರೆಸಿಕೊಳ್ಳುವರೇ ಕರ್ನಾಟಕ ಸರಕಾರ, ಜಿಲ್ಲಾಡಳಿತಗಳಿಗೆ ಸಲಹಿ ಅನಿವಾಸಿಗರ ಮನೋಸ್ಥೈರ್ಯ ತುಂಬಿ ಧನಾತ್ಮಕ ಹೇಳಿಕೆಯನ್ನಿತ್ತು ನಾವೂ ತಮ್ಮೊಂದಿಗೆ ಇರುವುದಾಗಿ ಭರವಸೆಯನ್ನಿತ್ತು ಅನಿವಾಸಿ ಕನ್ನಡಿಗರಿಗೆ ಆದರದಿಂದ ಬರಮಾಡಿಕೊಂಡ ಪ್ರಭಾಕರ್ ಭಟ್ ಅವರ ಸಮಯೋಚಿತ ಕಾರ್ಯವೈಖರಿಗೆ ಎರ್ಮಾಳ್ ಹರೀಶ್ ಪ್ರಶಂಸಿಸಿ ಅಭಿವಂದಿಸಿದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...