Thursday, February 13, 2025

ದಶಮಾನೋತ್ಸವದ ಉದ್ಘಾಟನೆ ಮತ್ತು ಪದವಿ ವಿದ್ಯಾರ್ಥಿಗಳ ಪ್ರವೇಶೋತ್ಸವ

ಕಲ್ಲಡ್ಕ: ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾದಾಗ ಒಪ್ಪಿಕೊಳ್ಳುವ ಮನೋಸ್ಥಿತಿ ನಿರ್ಮಾಣವಾಗಬೇಕು ಆಗ ಶಿಕ್ಷಣ ದೃಢವಾಗುತ್ತದೆ ಎಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ದಶಮಾನೋತ್ಸವ ಕಾರ್ಯಕ್ರಮ ಉದ್ಘ್ಘಾಟಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಸುಬ್ರಹ್ಮಣ್ಯಯಡಪಡಿತ್ತಾಯ ಇವರು ಮಾತನಾಡಿದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 210 ಕಾಲೇಜುಗಳಲ್ಲಿ ರಾಷ್ಟ್ರಾಭಿಮಾನ, ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುವ ಶ್ರೀರಾಮ ಕಾಲೇಜಿಗೆ ವಿಶೇಷ ಸ್ಥಾನಮಾನ. ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬಲ್ಲ ಮಾನಸಿಕ ಶಾರೀರಿಕ, ಬೌದ್ಧಿಕ, ಸಾಮಾಜಿಕ ಆಧ್ಯಾತ್ಮಿಕ 5 ಆಯಾಮಗಳ ಮೂಲಕವೇ ಇಲ್ಲಿ ಶಿಕ್ಷಣವನ್ನು ನೀಡುತ್ತಿರುವುದು ವಿಶೇಷ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಮಾತನಾಡಿ ಸಮಾಜದ ಸಚ್ಚಾರಿತ್ಯವನ್ನು ಉಳಿಸುವ ನಿಟ್ಟಿನಲ್ಲಿ, ದೇಶದಗರಿಮೆ, ಹಿರಿಮೆ, ಸಂಸ್ಕಾರ, ಸಂಸ್ಕೃತಿಯನ್ನು ಶಿಕ್ಷಣದ ಜೊತೆಗೆ ಎತ್ತಿ ಹಿಡಿಯುವ ವಿದ್ಯಾ ಸಂಸ್ಥೆಗಳ ಅವಶ್ಯಕತೆ ಇದ್ದು ನಮ್ಮ ಸಂಸ್ಥೆಯು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಎನ್. ಎಂ. ಪಿ. ಟಿ. ಅಧ್ಯಕ್ಷರಾದ ಎ.ವೆಂಕಟರಮಣ ಅಕ್ಕರಾಜು ಇವರು ಜೀವನ ಮೌಲ್ಯಗಳನ್ನು ಕಲಿಸುವ ನಮ್ಮ ಸಂಸೃತಿ ರಾಮಾಯಣ, ಪುರಾಣಗಳನ್ನು ಕಲಿಸಲು ಹಿಂಜರಿಯುತ್ತಿರುವ ಈ ಕಾಲದಲ್ಲಿ ಈ ಶಿಕ್ಷಣ ಸಂಸ್ಥೆಯು ಮಾದರಿಯಾಗಿದ್ದು, ಮುಂದೊಂದು ದಿನ ಸ್ವರ್ಣ ಭಾರತವನ್ನು ಕಾಣುವ ಭರವಸೆ ಇದೆ ಎಂದರು. ಆರ್.ಟಿ ಐ ಕಮೀಷನರ್ ಸಂತೋಷ್. ಯಲ್. ಪಾಟೀಲ್‌ ಅಗ್ನಿ ಹೋತ್ರದ ಮೂಲಕ ಪ್ರವೇಶೋತ್ಸವಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬೆಳಗಾವಿ, ಕುಡಚಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರಾಜೀವ ಮಾತನಾಡಿ ವಿದ್ಯಾರ್ಥಿಯ ವಿದ್ಯಾಭ್ಯಾಸವು ಭರತಮಾತೆಗೆ ಮುಡಿಪಾಗಿರಲಿ ಎಂದರು. ಚಲನ ಚಿತ್ರೋದ್ಯಮದ ಖ್ಯಾತ ನಿರ್ಮಾಪಕ ಟಿ. ಆರ್.ಚಂದ್ರಶೇಖರಇವರು ವಿದ್ಯೆಯೆಂಬುದು ಬರೀ ಸಾಕ್ಷರತೆಯಲ್ಲ, ದೈವತ್ವಕ್ಕೆ ಏರಿಸುವಂತಹುದು. ಇಲ್ಲಿ ಸಿಗುವ ಶಿಕ್ಷಣ ದೇಶದ ಮೂಲೆಮೂಲೆಗಳಿಗೂ ಪಸರಿಸಲಿ ಎಂದಾಶಿಸಿದರು. ದಶಮಾನೋತ್ಸವ ಸ್ಮರಣಾರ್ಥವಾಗಿತೆಂಗಿನ ಸಸಿಯನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಕಾಶ್ ಭಟ್, ಪ್ಯಾರಾಒಲಂಪಿಕ್ ಸ್ವರ್ಣಪದಕ ವಿಜೇತ ನಯಮತ್ತುಲ್ಲಾಖಾನ್, ಮುನೀಶ್‌ಕುಮಾರ್, ಸಂಸ್ಥೆಯಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್‌ಎನ್, ರಾಷ್ಟ್ರ ಸೇವಿಕಾ ಸಮಿತಿದಕ್ಷಿಣ ಪ್ರಾಂತಕಾರ್ಯಕಾರಿಣಿ ಸದಸ್ಯೆ ಕಮಲಾ ಪ್ರಭಾಕರ ಭಟ್‌ ಉಪಸ್ಥಿತರಿದ್ದರು. ಬಂಕಿಮ ಚಂದ್ರಚಟರ್ಜಿಯವರ ಜನ್ಮದಿನದ ಅಂಗವಾಗಿ ಹಿರಿಯ ವಿದ್ಯಾರ್ಥಿನಿ ವಿದ್ಯಾಶ್ರೀ ವಂದೇ ಮಾತರಂ ಹಾಡಿದರು.
ಈ ಸಂದರ್ಭದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತಿಲಕಧಾರಣೆ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ, ಅಗ್ನಿಗೆಹವಿಸ್ಸನ್ನು ಅರ್ಪಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದಕಾಯರ್‌ಕಟ್ಟೆ ಪರಿಚಯಿಸಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಾಕ್ಷ್ಯ ವಂದಿಸಿ, ಭವಾನಿ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...