Wednesday, January 28, 2026

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ವಿಠೋಬ ವಿಠಲ 2019  ನೃತ್ಯ ಭಜನಾ ಸ್ಪರ್ಧೆ- ಸಮಾರೋಪ

ಬಂಟ್ವಾಳ: ವೈಜ್ಞಾನಿಕವಾಗಿ ನಾವು ಎಷ್ಟೇ ಬೆಳವಣಿಗೆ ಕಂಡರೂ ಅದು ನಮ್ಮ ಮೂಲ ಚಿಂತನೆಗೆ ತೊಡಕಾಗಬಾರದು. ನಮ್ಮ ಪೂರ್ವಜರು ಆಚರಿಸಿಕೊಂಡು ಬಂದಿರುವ ಪದ್ಧತಿ, ಆಚಾರ-ವಿಚಾರ, ಸಂಸ್ಕೃತಿ, ಮುಂತಾದುವುಗಳ ಮೌಲ್ಯ ಎಂದಿಗೂ ನಶಿಸಿಹೋಗುವಂಥದಲ್ಲ. ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹ ಕೇವಲ ಕ್ಷಣಿಕವಾಗಿರುವುದೇ ಹೊರತು, ಭಕ್ತಿ-ಭಾವನೆ ಬೆಳೆಸುವಂಥದ್ದಲ್ಲ ಎಂದು ವಿವೇಕಾನಂದ ಬಿಎಡ್ ಕಾಲೇಜಿನ ಉಪನ್ಯಾಸಕಿ ಡಾ| ಶೋಭಿತಾ ಸತೀಶ್ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಇಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ವಿಠೋಬ ವಿಠಲ 2019 ನೃತ್ಯ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ತೀರ್ಪುಗಾರರಾಗಿ ಆಗಮಿಸಿ ಹೀಗೆಂದರು. ಎಲ್ಲಿ ಭಕ್ತಿ ಶ್ರದ್ಧೆಯಿಂದ ಭಗವಂತನನ್ನು ಹಾಡಿ ಕುಣಿಯುತ್ತಾರೋ ಅಲ್ಲಿ ಭಗವಂತನು ವಾಸವಾಗಿರುತ್ತಾನೆ. ಮೊಬೈಲನ್ನು ಜೀವನದ ಅವಿಭಾಜ್ಯ ಅಂಗವಾಗಿ ಬಳಸಿಕೊಂಡಿರುವ ಇಂದಿನ ಕಾಲಘಟ್ಟದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ನಮ್ಮ ಸಂಸ್ಕೃತಿ ಯುವಪೀಳಿಗೆಗೆ ತಲುಪುತ್ತಿರುವುದು ಸಾಕ್ಷಿಯಾಗಿದೆ ಮತ್ತು ಇದಕ್ಕೆ ಪೂರಕವಾದ ಕಾರ್ಯ ಈ ವಿದ್ಯಾಸಂಸ್ಥೆಯಲ್ಲಿ ನಡೆದಿದೆ ಎಂದರು.


ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೃತ್ಯ ಭಜನೆ ಸಂಸ್ಕೃತಿಯನ್ನು ಪೋಷಿಸುವಂತಹ ಒಂದು ಅದ್ಭುತವಾದ ಕಾರ್ಯ. ನಮ್ಮ ಶರೀರ ಮನಸ್ಸು ಬುದ್ಧಿ ಅದೆಲ್ಲವೂ ಒಳ್ಳೆಯ ಚಿಂತನೆಯ ಕಡೆಗೆ ಹೋಗಬೇಕು. ಭಾವನೆಗಳನ್ನು ಅರಳಿಸುವ, ಧರ್ಮ ಜಾಗೃತಿ ಮತ್ತು ಸಂಸ್ಕೃತಿಯನ್ನು ಉಳಿಸುವಂತ ವಿಶಿಷ್ಟವಾದ ಶಕ್ತಿ ನೃತ್ಯ ಭಜನೆಯಲ್ಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹುಮಾನ ಅವಶ್ಯಕ, ಆದರೆ ನೃತ್ಯ ಭಜನೆ ಬಹುಮಾನದ ಸ್ಪರ್ಧೆಯಾಗಿ ಮಾತ್ರ ಉಳಿಯದೆ ನಮ್ಮ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವಂಥ ಕಾರ್ಯಕ್ರಮವಾಗಬೇಕು ಎಂದು ನುಡಿದರು.
ವೇದಿಕೆಯಲ್ಲಿ ಡಾ| ಕಮಲಾ ಪ್ರಭಾಕರ ಭಟ್ ಉಪಸ್ಥಿತರಿದ್ದರು.
ಈ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಟ್ಟು 11 ಕಾಲೇಜುಗಳಿಂದ 11 ತಂಡ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಗೋವಿಂದ ದಾಸ ಕಾಲೇಜು ಸುರತ್ಕಲ್, ದ್ವಿತೀಯ ಸ್ಥಾನವನ್ನು ರಾಮಕೃಷ್ಣ ಕಾಲೇಜು ಮಂಗಳೂರು, ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರು ಪಡೆದುಕೊಂಡಿತು.
ತೀರ್ಪುಗಾರರಾಗಿ ರಂಗಭೂಮಿ ಕಲಾವಿದ, ಅಂಕಣಕಾರ ಮೌನೇಶ್ ವಿಶ್ವಕರ್ಮ, ವಿವೇಕಾನಂದ ಬಿಎಡ್ ಕಾಲೇಜಿನ ಉಪನ್ಯಾಸಕಿ ಡಾ| ಶೋಭಿತಾ ಸತೀಶ್, ಯೋಗೀಶ್ ಶಂಭೂರು, ಪ್ರಶಾಂತ್ ನರಿಕೊಂಬು ಆಗಮಿಸಿದ್ದರು.
ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾಳುಗಳು ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ಅತಿಥಿಗಳನ್ನು ವಿದ್ಯಾರ್ಥಿಗಳಾದ ಅನುಷಾ ಸ್ವಾಗತಿಸಿ, ಅಖಿಲಾ ವಂದಿಸಿ, ತ್ರಿವೇಣಿ ಕಾರ್ಯಕ್ರಮವನ್ನು ನಿರೂಪಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...