Wednesday, January 28, 2026

ಕಲ್ಲಡ್ಕ ಶ್ರೀ ರಾಮಾಂಜನೇಯ ಟ್ರಸ್ಟ್ ಸಮಿತಿಯಿಂದ ಈ ಬಾರಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಸರಳ ಆಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಮಂದಿರದ ಶ್ರೀ ರಾಮಾಂಜನೇಯ ಟ್ರಸ್ಟ್ ನ ಉತ್ಸವ ಸಮಿತಿ ಮತ್ತು ಭಜನಾ ಸಮಿತಿಯ ಪ್ರಮುಖರು ಸಾರ್ವಜನಿಕ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ನಡೆಸುವ ಬಗ್ಗೆ ಸಭೆ ನಡೆಯಿತು. ಶ್ರೀರಾಮ ಮಂದಿರದ ವತಿಯಿಂದ ನಡೆಯುವ 88 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವ ಮತ್ತು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಬಗ್ಗೆ ಚರ್ಚಿಸಿ ಈ ಬಾರಿಯ ಆಚರಣೆ ಯಾವುದೇ ಸಾರ್ವಜನಿಕ ಕಾರ್ಯಕ್ರಮವಿರದೆ ಸರಳ ರೀತಿಯಲ್ಲಿ ಆಚರಿಸಲು ಸಲಹೆ ವ್ಯಕ್ತವಾಗಿದೆ.

88 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವದ ಬಗ್ಗೆ ಚರ್ಚಿಸಿ ಈ ಕೆಳಗಿನಂತೆ ತೀರ್ಮಾನಿಸಿದೆ.
ಆಗಸ್ಟ್ 11 ರಂದು ರಾತ್ರಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀರಾಮ ಮಂದಿರದಲ್ಲಿ ರಾತ್ರಿ 8 ರಿಂದ ಚಂದ್ರೋದಯದ ತನಕ ಭಜನೆ ನಡೆಯಲಿದೆ. ಆಗಸ್ಟ್ 12 ರಂದು ಮೊಸರುಕುಡಿಕೆ ಉತ್ಸವದ ಪ್ರಯುಕ್ತ ಮನೆ ಮನೆಗಳಲ್ಲಿ ಮಕ್ಕಳ ಶ್ರೀಕೃಷ್ಣ ವೇಷಧಾರಿಗಳ ವೀಡಿಯೋಗಳ ನೇರ ಪ್ರಸಾರವನ್ನು ಶ್ರೀರಾಮ ಮಂದಿರದ ಫೇಸ್ಬುಕ್ ಪೇಜ್ ನಲ್ಲಿ ವೀಕ್ಷಿಸಬಹುದು (15 ಸೆಂಕೆಡ್ ನ ವೀಡಿಯೋ ಚಿತ್ರೀಕರಣ ನಡೆಸುವ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು.) ಎಂದು ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್(ರಿ.) ನ ಅಧ್ಯಕ್ಷರು ತಿಳಿಸಿದ್ದಾರೆ.

45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಬಗ್ಗೆಯೂ ಈ ಸಮಯದಲ್ಲಿ ಚರ್ಚಿಸಲಾಯಿತು. ಶ್ರೀರಾಮ ಮಂದಿರದಲ್ಲಿ ಆಗಸ್ಟ್ 22 ರಂದು ಬೆಳಿಗ್ಗೆ 9.30 ಗಣಹೋಮ ನಡೆಯಲಿದೆ. ಆಗಸ್ಟ್ 23 ರಂದು ಮನೆ ಮನೆಗಳಲ್ಲಿ ನಡೆಯುವ ಗಣಪತಿ ಪೂಜೆ, ಅಲಂಕಾರ ಮತ್ತು ಮಂದಿರದ ವತಿಯಿಂದ ನೀಡುವ ಭಜನೆಗೆ, ನೃತ್ಯಭಜನೆ ನಡೆಸಿದ ವೀಡಿಯೋದ ನೇರಪ್ರಸಾರ ಶ್ರೀರಾಮ ಮಂದಿರದ ಫೇಸ್ಬುಕ್ ಪೇಜ್ ನಲ್ಲಿ ವೀಕ್ಷಿಸಬಹುದು (15ಸೆಂಕೆಡ್ ನ ವೀಡಿಯೋ ಚಿತ್ರೀಕರಣ ನಡೆಸುವ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು.) ಎಂದು ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್(ರಿ.) ನ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...