Saturday, February 8, 2025

ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಕಲ್ಲಡ್ಕ: ನಮ್ಮ ದೇಶದ ಬಗ್ಗೆ ಹೆಮ್ಮೆ ಇದೆ. ಪ್ರಪಂಚ ನಮ್ಮನ್ನು ಆಧರಿಸಿ ಗೌರವಿಸಬೇಕಾದರೆ ನಾವು ಸುಶಿಕ್ಷರಾಗಿರಬೇಕು. ಶಿಕ್ಷಣವನ್ನು ಮುಂದುವರಿಸಿ ಎಲ್ಲಾ ಸಾಧನೆಗಳಲ್ಲಿ ನೀವಿರಬೇಕು. ವಿದ್ಯಾರ್ಥಿಗಳಾದ ನೀವು ಮುಂದಿನ ಬೆಳಕು. ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಈ ದೇವಸ್ಥಾನದಲ್ಲಿ ನೋಡಿ ಧನ್ಯತಾ ಭಾವ ಮೂಡಿತು ಎಂದು ಬಾಕ್ರಬೈಲು ಶ್ರೀಸೂರ್ಯೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ಆಳ್ವ ಮಕ್ಕಳಿಗೆ ಶುಭ ಹಾರೈಸಿದರು.
ಬಾಕ್ರಬೈಲು, ಪಾತೂರು ಶ್ರೀಸೂರ್ಯೇಶ್ವರ ದೇವಸ್ಥಾನದಲ್ಲಿ , ಶ್ರೀರಾಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳೆಲ್ಲರೂ ಚಾರಣದ ಮೂಲಕ ದೇವಸ್ಥಾನ ತಲುಪಿದರು
ಅತಿಥಿಗಳಿಗೆ ಹೂಗುಚ್ಛ ನೀಡಿ ಸಾಂಕೇತಿಕವಾಗಿ ಸ್ವಾಗತಿಸಲಾಯಿತು. ವಾಸವಿ ಹಾಗೂ ತಂಡದವರು ಪ್ರೇರಣಾ ಗೀತೆ ಹಾಡಿದರು. ನಂತರ ವಿದ್ಯಾರ್ಥಿಗಳು ಬೇಸಿಗೆ ಶಿಬಿರದ ಕುರಿತಾಗಿ ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ಹತ್ತು ದಿನಗಳ ಕಾಲ ನಡೆದ ಶುಲ್ಕರಹಿತ ಈ ಬೇಸಿಗೆ ಶಿಬಿರದಲ್ಲಿ, ನೃತ್ಯ, ನಾಟಕ ಅಭಿನಯ, ವೈದ್ಯರಿಂದ ಆರೋಗ್ಯ ಸಲಹೆ, ಕುದ್ರೋಳಿ ಗಣೇಶ್ ಅವರ ಜಾದೂ ಪ್ರದರ್ಶನ, ರಾಮಕೃಷ್ಣ ಕಾಟುಕುಕ್ಕೆಯವರಿಂದ ದಾಸಕೀರ್ತನೆ, ಹರಿಕಥೆ, ಕೃಷಿ ಮಾಹಿತಿ, ಪುರಾಣ ಕಥೆ, ಯೋಗಾ, ಚಿತ್ರಕಲೆ, ಚುಟುಕು, ಕಥೆ ಹಾಗೂ ಕವನ ರಚನೆ ಮುಂತಾದವುಗಳ ಬಗ್ಗೆ ತರಬೇತಿ ನೀಡಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಪ್ರೌಢ ವಿದ್ಯಾರ್ಥಿಗಳೆ ರಚಿಸಿದ ಕತೆ, ಕವನ, ಚಿತ್ರಕಲೆ ಇತ್ಯಾದಿಗಳನ್ನು ಒಳಗೊಂಡ ಕಲಾರಾಮ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಪ್ರಭಾಕರ್ ಭಟ್ ಕಲ್ಲಡ್ಕ, ಬಾಕ್ರಬೈಲು ಶ್ರೀಸೂರ್ಯೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಮುಖ್ಯಸ್ಥರಾದ ಮಂಜುನಾಥ ಶೆಟ್ಟಿ, ದೇವಸ್ಥಾನದ ಪವಿತ್ರ ಪಾಣಿ ಹಾಗೂ ಕೋಶಾಧಿಕಾರಿಯಾದ ಕುಶಲ್ ಕುಮಾರ್ ಪಾತೂರಾಯ ಮತ್ತು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್ ಇವರು ಉಪಸ್ಥಿತಿಯಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಶಮಾತ್ಮಿಕಾ ನಿರೂಪಿಸಿ, ರೋಶ್ನಿ ಸ್ವಾಗತಿಸಿ, ಸಮೀಕ್ಷಾ ವಂದಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...