Thursday, February 13, 2025

ಮಾನವೀಯತೆ ತೋರಿಸಿದ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬೆಂಜೆತ್ತಿಮಾರು ಪಾತ್ರೆಜಾಲು ನಾಗರತ್ನ ಎಂಬ ಬಡ ಮಹಿಳೆ ತಮ್ಮ ಹತ್ತಿರದ ಸಂಬಂದಿಕರ ಪರಸ್ಪರ ಹೊಂದಾಣಿಕೆಯ ಕೊರತೆಯಿಂದಾಗಿ ಹಳೆ ತಟ್ಟಿ ಗುಡಿಸಲಿನಲ್ಲಿ ಶೋಚನೀಯ ಸ್ಥಿತಿಯಲ್ಲಿ ವಾಸಿಸುವ ಮಾಹಿತಿ ತಿಳಿದ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ಶೌಯ೯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮಹಿಳೆಯ ಸಂಭಂಧಿಕರ ಮನವೋಲಿಸಿ ಹಳೆ ತಟ್ಟಿ ಮನೆಯಿಂದ ತೆರವುಗೊಳಿಸುವ ಮೂಲಕ ಹೊಸ ಮನೆಯಲ್ಲಿ ವಾಸಿಸುವಂತೆ ಬಿನ್ನವಿಸಿ ಈ ಮೂಲಕ ಮಾನವೀಯತೆ ಮೆರೆದರು, ನಂತರ ಮಹಿಳೆಯ ಮನೆಯ ಸುತ್ತ ಮುತ್ತ ಇದ್ದ ಗಲೀಜುಗಳನ್ನು ತೆರವುಗೊಳಿಸಿ. ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ದೇವಿಪ್ರಶಾದ್ ಶೆಟ್ಟಿ, ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಕಲ್ಲಡ್ಕ ವಲಯ ಅದ್ಯಕ್ಷರಾದ ತುಳಸಿ ಕೊಳಕೀರು, ಕೆಲಿಂಜ ಒಕ್ಕೂಟದ ಅಧ್ಯಕ್ಷರಾದ ದಯಾನಂದ್, ಶೌರ್ಯ ವಿಪತು ನಿರ್ವಹಣ ತಂಡದ ಕಲ್ಲಡ್ಕ ಘಟಕದ ಅಧ್ಯಕ್ಷ ಮಾಧವ ಸಾಲಿಯಾನ್,ಸಂಯೋಜಕಿ ವಿದ್ಯಾ ಕಲ್ಲಡ್ಕ, ಕೆಲಿಂಜ ಒಕ್ಕೂಟ ಸೇವಾಪ್ರತಿನಿಧಿ ರೇಣುಕಾ, ಕಲ್ಲಡ್ಕ ಒಕ್ಕೂಟ ಸೇವಾಪ್ರತಿನಿಧಿ ಗಣೇಶ್,ಶೌರ್ಯ ತಂಡದ ಸದಸ್ಯರುಗಳಾದ ರಮೇಶ್ ಕುದ್ರೆಬೆಟ್ಟು,ಸತೀಶ್ ಕುಧ್ರೆಬೆಟ್ಟು, ಸಂತೋಷ್ ಕುಮಾರ್ ಬೊಲ್ಪೊಡಿ , ಚಂದಪ್ಪ ಕುಲಾಲ್ , ವೆಂಕಪ್ಪ ಕುಲಾಲ್ , ಶೇಕ್ ಸಾಬಿರ್ , ಮಕ್ಬೂಲ್ ಖಾನ್ , ನಾಗೇಶ್ ,ವೆಂಕಪ್ಪ, ಮೌರಿಶ್, ಧನಂಜಯ ಕಾರ್ಯದಲ್ಲಿ ಭಾಗವಹಿಸಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...