Thursday, February 13, 2025

ಫೆ.21-24 : ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ

ಬಂಟ್ವಾಳ: ವಿಭಿನ್ನ ಚಿಂತನೆಯ ಮೂಲಕ ಬೆಳೆಯುತ್ತಿರುವ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ನಡೆಯಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಕಲ್ಲಡ್ಕ ಡಾ: ಪ್ರಭಾಕರ್ ಭಟ್ ಅವರು ತಿಳಿಸಿದರು.

ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಮಂದಿರದ ಮೇಲ್ಚಾವಣಿಯ ಉದ್ಘಾಟನೆ ಹಾಗೂ ಮಾತೃ ಸಂಗಮ‌ ಕಾರ್ಯಕ್ರಮ ವಿಭಿನ್ನವಾಗಿ ನಡೆಯಲಿದೆ ಎಂದು ಅವರು ತಿಳಿಸಿದರು.

ಫೆ.21 ರಂದು ಬುಧವಾರ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ತೀರ್ಥ ಕಲಶಗಳನ್ನು ಮಂದಿರಕ್ಕೆ ತರಲಾಗುತ್ತದೆ.

ಶ್ರೀ ರಾಮವಿದ್ಯಾಕೇಂದ್ರದ ಮಕ್ಕಳಿಂದ ಸರಸ್ವತಿ ಪೂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಮಂದಿರದ ಸುತ್ತಮುತ್ತಲಿನ ಭಾಗದಿಂದ ಆಗಮಿಸಿದ ಹೊರಕಾಣಿಕೆ ನರಹರಿ ಪರ್ವತ ಧ್ವಾರದಿಂದ ಮಂದಿರದವರೆಗೆ ವೈಭ ಮೆರವಣಿಗೆ ಮೂಲಕ ಆಗಮನವನ್ನು ಸ್ವಾಗತಿಸಿಲಿದ್ದೇವೆ.

ಸಂಜೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಫೆ. 22 ರಂದು ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮಾಂಗಣ ಲೋಕಾರ್ಪಣೆ ಕಾರ್ಯಕ್ರಮ.

ಫೆ.23 ರಂದು ಮಾತೃ ಸಂಗಮ ಹಾಗೂ ಕುಂಕುಮಾರ್ಚನೆ ಕಾರ್ಯಕ್ರಮ.

ಫೆ. 24 ರಂದು 13 ಕೋಟಿ ರಾಮನಾಮ ತಾರಕ ಜಪಯಜ್ಞ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಹಿರಿಯರ ಪ್ರಕಾರ ಗಣಪತಿಯ ಇರುವಿಕೆಯು ಗೋಚರಕ್ಕೆ ಬಂದ ಹಿನ್ನೆಲೆಯಲ್ಲಿ ,ವಾಸ್ತು ತಜ್ಞರ ಸಲಹೆಯ ಮೇರೆಗೆ,

ಪ್ರಶ್ನಾ ಚಿಂತನೆಯ ಪ್ರಕಾರ ಗಣಪತಿ ಪ್ರತಿಷ್ಟಾಪನೆ ಮಾಡಲಾಗುತ್ತದೆ.

6 ಅಡಿ 2 ಇಂಚು ಎತ್ತರದ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಿದ್ದೇವೆ.

ರಾಮ ಮಂದಿರ ಅನೇಕ ರಾಷ್ಟ್ರೀಯ ಹೋರಾಟಗಳಲ್ಲಿ ಭಾಗಿಯಾಗಿ, ಸಾಮಾಜಿಕ ಕಾರ್ಯಗಳಿಗೆ ಸಾಕ್ಷಿಯಾಗಿದೆ.

ರಾಮಮಂದಿರದ ಪ್ರೇರಣೆಯಿಂದ ಕಲ್ಲಡ್ಕ ಶ್ರೀರಾಮ‌ ವಿದ್ಯಾ ಸಂಸ್ಥೆ ಹುಟ್ಟಿಕೊಂಡಿದ್ದು, ಇದೀಗ ರಾಷ್ಟ್ರೀಯ ಚಿಂತನೆಯ ಶಿಕ್ಷಣದ ಮೂಲಕ ದೇಶದಲ್ಲಿ ಹೆಸರು ಪಡೆದಿದೆ.

ಇದರ ಜೊತೆಗೆ ಕಲ್ಲಡ್ಕದಿಂದ ಎರಡು ಶಾಸಕರಾಗಿ ಆಯ್ಕೆಯಾಗಿರುವುದು ಇದೇ ರಾಮನ ಕೃಪೆಯಿಂದ ಎಂದು ಅವರು ತಿಳಿಸಿದರು.

ದೇವ ಮತ್ತು ದೇಶ ಎರಡು ಚಿಂತನೆಯನ್ನು ಈ ರಾಮಮಂದಿರಕ್ಕೆ ಆಗಮಿಸಿದ ಪ್ರತಿಯೊಬ್ಬರೂ ಪಡೆಯಬೇಕು ಎಂಬ ಯೋಚನೆ ನಮ್ಮದಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ನಾರಾಯಣ ಸೋಮಯಾಜಿ, ಚೆನ್ನಪ್ಪ ಆರ್.ಕೋಟ್ಯಾನ್, ನಾಗೇಶ್ ಕಲ್ಲಡ್ಕ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...