Sunday, February 1, 2026

ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿಯ ಕಡೆಗೆ ಹೋಗಬೇಕಾದರೆ ಜ್ಞಾನರ್ಜನೆಯಾಗಬೇಕು-ಸ್ವಾಮಿ ರಘರಾಮಾನಂದಜೀ 

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ ನಡೆಯಿತು.

ಕಲ್ಲಡ್ಕ: ಶ್ರೀರಾಮ ಒಬ್ಬ ಆದರ್ಶ ಪುರುಷ, ಅವನ ಗುಣಗಳನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಏಕಾಗ್ರತೆಯ ಕಥೆಯನ್ನು ತಿಳಿಸುತ್ತಾ ಏಕಾಗ್ರತೆಯ ಮಹತ್ವನ್ನು ತಿಳಿಸಿದರು. ಈ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಶಿಸ್ತನ್ನು ಕಂಡು ನನಗೆ ತುಂಬಾ ಸಂತೋಷವಾಯಿತು. ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿಯ ಕಡೆಗೆ ಹೋಗಬೇಕಾದರೆ ಜ್ಞಾನರ್ಜನೆಯಾಗಬೇಕು. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಮಾಡಬೇಕು ಎಂದು ಮಂಗಳೂರು ಶ್ರೀರಾಮಕೃಷ್ಣಾಶ್ರಮದ ಬಾಲಕಾಶ್ರಮದ ಪ್ರಮುಖ ಸ್ವಾಮಿ ರಘರಾಮಾನಂದಜೀ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಶ್ರಯದ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆದ ಸರಸ್ವತಿ ಪೂಜೆಯಲ್ಲಿ ಮಾರ್ಗದರ್ಶನ ಮಾಡಿದರು.

ಪ್ರಾರಂಭದಲ್ಲಿ ತಟ್ಟೆಯಲ್ಲಿ ಸರಸ್ವತಿ ಭಾವಚಿತ್ರ ಹಾಗೂ ಹೂವಿನೊಂದಿಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳು ಮಂದಿರದ ಮುಂಭಾಗದಲ್ಲಿ ಸಾಲಾಗಿ ಪೂಜೆಗೆ ಉಪಸ್ಥಿತರಾದರು. ಕಶೆಕೋಡಿ ಸೂರ್‍ಯಭಟ್ ಹಾಗೂ ಅವರ ಬಳಗದವರು ಸರಸ್ವತಿ ಮಂತ್ರವನ್ನು ಪಠಿಸಿ ಪೂಜಾ ಕಾರ್‍ಯವನ್ನು ನಡೆಸಿಕೊಟ್ಟರು. ಶಿಶು ಮಂದಿರದಿಂದ ಪದವಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ಪೂಜೆಗೆ ಕುಳಿತು ಪೂಜಾ ವಿಧಾನಗಳನ್ನು ಮಾಡಿದರು.


ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಅವರು ಸ್ವಾಮೀಜಿ ಅವರಿಗೆ ಫಲಪುಷ್ಪ ನೀಡಿ ಗೌರವಿಸಿದರು. ವೇದಿಕೆಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್‌ ಕಲ್ಲಡ್ಕ ಹಾಗೂ ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್‌ಎನ್., ಎಲ್ಲಾ ವಿಭಾಗದ ಮುಖ್ಯಸ್ಥರು, ಶಿಕ್ಷಕರು ಶಿಕ್ಷಕೇತರರು, ಪೋಷಕರು ಉಪಸ್ಥಿತರಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...