Wednesday, July 9, 2025

ಶಿಕ್ಷಕರ ದಿನಾಚರಣೆ

ಬಂಟ್ವಾಳ : ಶ್ರೀರಾಮ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ತಮಗೆ ಶಿಕ್ಷಣ ಬೋಧಿಸುತ್ತಿರುವ ತಮ್ಮ ಉಪನ್ಯಾಸಕರ ಶಿಕ್ಷಕರನ್ನು ಕಾಲೇಜಿಗೆ ಆಹ್ವಾನಿಸಿ ಶಿಕ್ಷಕ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ವಿಠ್ಠಲ ಸ್ಮಾರಕ ಪ್ರೌಢ ಶಾಲೆ ಕುರುಡುಪದವು ಇಲ್ಲಿಯ ಕನ್ನಡ ಶಿಕ್ಷಕ ಶ್ರೀಪತಿ ಭಟ್, ವಿಠ್ಠಲ ಪದವಿಪೂರ್ವ ಕಾಲೇಜು ಇಲ್ಲಿಯ ಇತಿಹಾಸ ಉಪನ್ಯಾಸಕ ಅಣ್ಣಪ್ಪ ಶಾಸ್ತಾನ, ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದಯಾನಂದ ನಾಯಕ್, ವಿಠ್ಠಲ ಪ್ರಥಮದರ್ಜೆ ಕಾಲೇಜು ವಿಟ್ಲ ಇದರ ಸಹಾಯಕ ಪ್ರಾಧ್ಯಾಪಕ ಚಕ್ರೇಶ್ವರಿ, ಎಸ್‌ವಿಎಸ್ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಪ್ರೊ.ರಾಜಮಣಿ ರಾಮಕುಂಜ, ಕರ್ನಾಟಕ ಪ್ರೌಢ ಶಾಲೆ ಮಾಣಿ ಇದರ ಮುಖ್ಯೋಪಾಧ್ಯಾಯರಾದ ಬಿ ಕೆ ಭಂಡಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಶಿಸ್ತು, ಕ್ಷಮೆ, ಕರುಣೆ ಇದ್ದರೆ ಗುರುವಿನ ಬದುಕು ಯಶಸ್ವಿಯಾಗಲು ಸಾಧ್ಯ. ವಿದ್ಯಾರ್ಥಿಯ ಬದುಕನ್ನು ತಾವೇ ತಿದ್ದಿಕೊಳ್ಳಲು ಪೂರಕ ವಾತಾವರಣ ಸೃಷ್ಟಿಸುವುದು ಶಿಕ್ಷಕನ ಜವಾಬ್ದಾರಿ ಎಂಬಂತೆ ಹಿರಿಯ ಉಪನ್ಯಾಸಕರು ತಮ್ಮ ಗುರುಗಳಿಗೆ ಪಾದಪೂಜೆಯನ್ನು ಮಾಡಿ ಶಾಲು ಹೊದಿಸಿ ಗೌರವಿಸಿದರು.ವಿದ್ಯಾರ್ಥಿಗಳು ಉಳಿದ ಎಲ್ಲಾ ಉಪನ್ಯಾಸಕರಿಗೆ ಪುಷ್ಪ ಕೊಟ್ಟು ಶುಭಾಶಯ ಪತ್ರವನ್ನು ನೀಡಿ ಶುಭಾಶಯ ಕೋರಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ರಚಿಸಿದ ತಾಯಿಯೇ ಮೊದಲ ಗುರು ಎಂಬ ಕಿರುಚಿತ್ರವನ್ನು ಪ್ರಸ್ತುತಪಡಿಸಿದರು. ಭವಿಷ್ಯದ ಶಿಕ್ಷಕರನ್ನು ರೂಪಿಸುವ ಭವಿಷ್ ಘಟಕಕ್ಕೆ ಸೇರ್ಪಡೆಗೊಂಡ ಪ್ರಥಮ ಪದವಿಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಸಂಕಲ್ಪವನ್ನು ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ, ಉಪನ್ಯಾಸಕರು ಉಪಸ್ಥಿತರಿದ್ದರು. ನಿರೀಕ್ಷಾ ಅಂತಿಮ ಬಿ.ಕಾಂ ಸ್ವಾಗತಿಸಿ, ತ್ರಿವೇಣಿ ಅಂತಿಮ ಬಿ.ಕಾಂ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಚೈತ್ರಾ ಮತ್ತು ಭವಾನಿ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...