Monday, January 26, 2026

ಜೀಪಿನಲ್ಲಿದ್ದ ಬ್ಯಾಗನ್ನು ಎಗರಿಸಿದ ಕಳ್ಳ : ಸಿ ಸಿ ಟಿವಿ ಸಹಾಯದಿಂದ ಕಳ್ಳನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಯಾತ್ರಿಕರು

ಸುಳ್ಯ ಗಾಂಧಿನಗರ ಮೆಟ್ರೋ ಹೋಟಲ್ ಮುಂಭಾಗದಿಂದ ಕಳ್ಳನೊಬ್ಬ ಯಾತ್ರಿಕರ ಜೀಪಿನಿಂದ ವ್ಯಾನಿಟಿ ಬ್ಯಾಗ್ ಎಗರಿಸಿದ್ದು ಬ್ಯಾಗ್ ಕಳೆದುಕೊಂಡಿದ್ದ ಯಾತ್ರಿಕರು ಕಳ್ಳತನದ ದೃಶ್ಯವನ್ನು ಸಿಸಿ ಟಿವಿ ಪುಟೇಜ್ ಸಹಾಯದಿಂದ ಪತ್ತೆ ಹಚ್ಚಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

 

ಕೇರಳ ಮೂಲದ ಯಾತ್ರಿಕರು ತಮ್ಮ ಕುಟುಂಬದ ಸದಸ್ಯರೊಂದಿಗೆ ಇಂದು ಮಡಿಕೇರಿ ಕಡೆ ಹೋಗುತ್ತಿದ್ದು ಗಾಂಧಿನಗರ ಮೆಟ್ರೋ ಹೋಟೆಲಿನಲ್ಲಿ ಉಪಹಾರಕ್ಕೆ ಎಂದು ತೆರಳಿದ್ದರು ಎನ್ನಲಾಗಿದೆ. ಉಪಹಾರ ಮುಗಿಸಿ ಜಿಪಿನ ಬಳಿ ಬಂದಾಗ ಜೀಪಿನ ಮುಂಭಾಗದ ಸೀಟಿನಲ್ಲಿ ಇರಿಸಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್ ನಾಪತ್ತೆಯಾಗಿತ್ತು. ಕೂಡಲೇ ಅವರು ಹೋಟೆಲ್ ಬಳಿ ಬಂದು ವಿಚಾರಿಸಿದಾಗ ಕಳ್ಳತನ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ನಂತರ ಗಾಂಧಿನಗರ ಪ್ರಗತಿ ಚಿಕನ್ ಅಂಗಡಿಯ ಸಿಸಿ ಟಿವಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿ ಜೀಪಿನಿಂದ ಬ್ಯಾಗನ್ನು ಕದ್ದೋಯುವ ದೃಶ್ಯ ಕಂಡು ಬಂದಿದೆ. ಕೂಡಲೆ ಸ್ಥಳೀಯರು ಮತ್ತು ಯಾತ್ರಿಕರು ಆತನನ್ನು ಹಿಡಿಯಲು ಹುಡುಕಾಟ ಮಾಡಿ ಪಕ್ಕದಲ್ಲಿದ್ದ ಬಾರಿನೊಳಗೆ ಹೋಗಿ ನೋಡಿದ್ದಾರೆ. ಈ ಸಂದರ್ಭ ಬ್ಯಾಗ್ ಕಳ್ಳತನ ಮಾಡಿದ್ದ ವ್ಯಕ್ತಿ ಬ್ಯಾಗಿನಲ್ಲಿದ್ದ ಮೊಬೈಲ್ ಫೋನನ್ನು ಹಿಡಿದುಕೊಂಡು ಕುಳಿತಿರುವ ದೃಶ್ಯ ಕಂಡುಬಂದಿದೆ. ಕೂಡಲೇ ಆತನನ್ನು ವಿಚಾರಿಸಿದಾಗ ಮೊಬೈಲ್ ಫೋನ್ ತೆಗೆದಿರುವುದಾಗಿ ಹೇಳಿದ್ದಾನೆ. ಬ್ಯಾಗಿನ ವಿಷಯ ಕೇಳಿದಾಗ ನನಗೆ ಗೊತ್ತಿಲ್ಲ ಎಂದು ಪಟ್ಟು ಹಿಡಿದು ಕುಳಿತ ಸಂದರ್ಭ ಅವರು ಆತನನ್ನು ಸುಳ್ಯ ಪೊಲೀಸ್ ಠಾಣೆಗೆ ತಮ್ಮ ಜೀಪಿನಲ್ಲಿ ಕೊಂಡೋಗಿ ಪೊಲೀಸರಿಗೆ ಒಪ್ಪಿಸಿ ಘಟನೆಯ ವಿವರವನ್ನು ಪೊಲೀಸರಿಗೆ ವಿವರಿಸಿದ್ದಾರೆ.

ಈ ವೇಳೆ ಪೊಲೀಸರು ಆತನನ್ನು ವಿಚಾರಿಸಿದಾಗ ಮದ್ಯಪಾನ ಸೇವಿಸುವುದಕ್ಕಾಗಿ ದುಡ್ಡಿಗಾಗಿ ತಾನೇ ತೆಗೆದಿರುವುದಾಗಿ ಹೇಳಿದ್ದು, ನಂತರ ಪೊಲೀಸರು ಆತನನ್ನು ಮತ್ತೆ ಗಾಂಧಿನಗರದ ಬಾರಿನ ಬಳಿ ಕರೆದುಕೊಂಡು ಬಂದಾಗ ಬಾರಿನ ಮೇಲ್ಭಾಗದಲ್ಲಿ ಎಸೆದಿದ್ದ ಬ್ಯಾಗನ್ನು ತೆಗೆದುಕೊಟ್ಟಿರುತ್ತಾನೆ. ಬ್ಯಾಗಿನೊಳಗೆ ಚಿನ್ನದ ಉಂಗುರ ಮತ್ತು ಒಂದು ಸಾವಿರ ನಗದು ಇದ್ದು ಕಳ್ಳನಿಗೆ ಇದನ್ನು ಕಂಡಿರಲಿಲ್ಲ.
ಒಟ್ಟಿನಲ್ಲಿ ಯಾತ್ರಿಕರು ಕೂಡಲೇ ಕಾರ್ಯಾಚರಣೆ ಮಾಡದೇ ಇದ್ದಲ್ಲಿ ಯಾತ್ರಿಕರಿಗೆ ಸುಮಾರು 50 ಸಾವಿರ ರೂಪಾಯಿಗಳ ನಷ್ಟ ಉಂಟಾಗುತ್ತಿತ್ತು ಎಂದು ತಿಳಿದು ಬಂದಿದೆ.

ಸಧ್ಯ ಪೊಲೀಸರು ಆತನನ್ನು ಠಾಣೆಗೆ ಕರೆದು ಹೋಗಿದ್ದಾರೆ ಎನ್ನಲಾಗಿದೆ. ಈತ ಮಡಿಕೇರಿ ಮೂಲದವನಾಗಿದ್ದು ಸುಳ್ಯಕ್ಕೆ ಕೆಲಸ ಹುಡುಕಿಕೊಂಡು ಬಂದಿದ್ದಾನೆ ಎಂದು ತಿಳಿದುಬಂದಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...