Tuesday, February 11, 2025

ಕಲ್ಲುಬೆಟ್ಟು : ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ ವಾರ್ಷಿಕ ಜಾತ್ರೊತ್ಸವ ಸಂಪನ್ನ

ಬಂಟ್ವಾಳ: ಪಿಲಾತಬೆಟ್ಟು ಗ್ರಾಮದ ನಯನಾಡು ಕಲ್ಲುಬೆಟ್ಟು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವೇ|ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಪ್ರ. ಅರ್ಚಕ ಗೋವಿಂದ ಭಟ್ ಸಹಕಾರದಲ್ಲಿ ಫೆ.13ರಂದು ಜರಗಿತು.
ಬೆಳಗ್ಗೆ ಪ್ರಾರ್ಥನೆ, ತೋರಣ ಮುಹೂರ್ತ, ಪುಣ್ಯಾಹವಾಚನ, ಕಲಶಾರಾಧನೆ, ಗಣಹೋಮ, ಪಂಚಾಮೃತಾಭಿಷೇಕ, ಕಲಶಾಷೇಕ, ಅಲಂಕಾರ ಪೂಜೆ, ಮಹಾಪೂಜೆ, 11 ಗಂಟೆಗೆ ಶ್ರೀ ದೇವರ ದರ್ಶನಬಲಿ, ಬಟ್ಟಲು ಕಾಣಿಕೆ ಪ್ರಸಾದ, ಪಲ್ಲಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ದೈವಗಳಿಗೆ ಪರ್ವಸೇವೆ, ಭಜನೆ,ರಂಗಪೂಜೆ, ಮಹಾಪೂಜೆ, ಶ್ರೀದೇವರ ಉತ್ಸವ ಬಲಿ, ಸೇವೆಗಳು, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಕುಮಂಗಿಲ, ಸದಸ್ಯರಾದ ರಾಜೇಂದ್ರ ಕೆ.ವಿ., ಮೋಹನ ಸಾಲ್ಯಾನ್, ರವೀಂದ್ರ ಶೆಟ್ಟಿ ಕಮ್ಮಾಜೆ, ರಮೇಶ್ ನಾಯ್ಕ, ನೋಣಯ ಮೂಲ್ಯ, ಲೀಲಾವತಿ, ಸುನೀತ ಹೆಗ್ಡೆ ಮತ್ತಿತರರು ಭಾಗವಹಿಸಿದ್ದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...