Wednesday, June 25, 2025

ಫೆ.25: ಕರಾವಳಿ ಕಲೋತ್ಸವ ಸಮಾರೋಪ *ಚಂದ್ರನ್* ಕಿರು ಚಿತ್ರದ ಟ್ರೈಲರ್ ಬಿಡುಗಡೆ

ಬಂಟ್ವಾಳ: ಮಂತ್ರದೇವತೆ ಕ್ರಿಯೇಶನ್ ನಿರ್ಮಾಣದಲ್ಲಿ  ಬಿಡುಗಡೆಗೆ ಸಿದ್ಧಗೊಂಡಿರುವ ಕಿರು ಚಿತ್ರ ಚಂದ್ರನ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕರಾವಳಿ ಕಲೋತ್ಸವ ೨೦೨೧ ಇದರ ಸಮಾರೋಪದಲ್ಲಿ ಬಿ.ಸಿ.ರೋಡ್‌ನ ಗೋಲ್ಡನ್ ಪಾರ್ಕ್ ಮೈದಾನದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವೇದಿಕೆಯಲ್ಲಿ ನಡೆಯಲಿದೆ.

ಕಿರು ಚಿತ್ರವನ್ನು ಚಲನಚಿತ್ರ ನಟ, ರಂಗಭೂಮಿ ರಮೇಶ್ ರೈ ಕುಕ್ಕುವಳ್ಳಿ ಅವರು ಬಿಡುಗಡೆಗೊಳಿಸಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಕಲೋತ್ಸವ ಸಮಿತಿ ಪದಾಧಿಕಾರಿಗಳು ಭಾಗವಹಿಸಲಿರುವರು.

ಕಿರುಚಿತ್ರದ ಕಥೆ ಕುಶಲ್ ಗೌಡ ಹೊಸಮನೆ, ರಕ್ಷಿತ್ ರೈ ಪುಂಜಾಲಕಟ್ಟೆ ನಿರ್ದೇಶನದಲ್ಲಿ ,ಜಯರಾಜ್ ಅತ್ತಾಜೆ ಮತ್ತು ಸಚಿನ್ ಅತ್ತಾಜೆ ಸಹ ನಿರ್ದೇಶನದಲ್ಲಿ ,ಗುರು ಬಾಯಾರು ಸಂಗೀತವಿದ್ದು , ಸವ್ಯರಾಜ್ ಕಲ್ಲಡ್ಕ ಅವರ ಪ್ರಸಾಧನವಿದೆ. ಕ್ರಿಯೇಟಿವ್ ಕ್ಯಾಮೆರಾಮೆನ್ ಬಾತು ಕುಲಾಲ್  ಛಾಯಾಗ್ರಹಣ ಮತ್ತು ಸಂಕಲನ ಮಾಡಿರುವ ಕಿರು ಚಿತ್ರದಲ್ಲಿ ಚಲನಚಿತ್ರ ನಟ ಡಿ.ಎಸ್. ಬೋಳೂರು,  ರತ್ನದೇವ್ ಪುಂಜಾಲಕಟ್ಟೆ , ಜಯರಾಜ್ ಅತ್ತಾಜೆ, ಸಚಿನ್ ಅತ್ತಾಜೆ, ನಮಿತಾ ಸುವರ್ಣ, ಹರಿಶ್ಚಂದ್ರ ಶೆಟ್ಟಿಗಾರ್, ದಾಮೋದರ ಆಚಾರ್ಯ, ಜಗದೀಶ ಮತ್ತಿತರರು ಅಭಿನಯಿಸಿರುವರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...