Thursday, February 13, 2025

ಮಹತ್ವಾಕಾಂಕ್ಷೆ ಇದ್ದರೆ ಮಾತ್ರ ಬದುಕು ಸಾರ್ಥಕ ವಾಗಲು ಸಾಧ್ಯ: ಹರಿಕ್ರಷ್ಣ ಬಂಟ್ವಾಳ್

ಬಂಟ್ವಾಳ: ನವೋದಯ ಯುವಕ ಸಂಘ(ರಿ) ಮೈರಾನ್ ಪಾದೆ , ಕಾಮಾಜೆ ಇವರ 29 ನೇ ವಾರ್ಷಿಕೋತ್ಸವ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ನವೋದಯ ರಂಗಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ನವ ಉದಯವಾಗಿರುವ ನವೋದಯ ಯುವಕ ಸಂಘ ಸಾಮಾಜಿಕ , ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳ ಮೂಲಕ ಜಿಲ್ಲೆ ಗೆ ಮಾದರಿಯಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮ ಕ್ಕೆ ಆಗಮಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಅಗಮಿಸಿ ಮಾತನಾಡಿದ ಹರಿಕ್ರಷ್ಣ ಬಂಟ್ವಾಳ್ ಪ್ರತಿಯೊಬ್ಬರು ತನ್ನ ಶಕ್ತಿಯನ್ನು ಭಾರತ ದೇಶದ ಆರ್ಥಿಕ ಸಾಮಾಜಿಕ ವ್ಯವಸ್ಥೆ ಯನ್ನು ಭದ್ರಗೊಳಿಸಲು ಸಲುವಾಗಿ ವಿನಿಯೋಗಿಸುವಂತೆ ಕರೆ ನೀಡಿದರು.

ಮನುಷ್ಯನ ಲ್ಲಿ ಮಹತ್ವಾಕಾಂಕ್ಷೆ ಇದ್ದರೆ ಮಾತ್ರ ಬದುಕು ಸಾರ್ಥಕ ವಾಗಲು ಸಾಧ್ಯ, ಪ್ರತಿಯೊಬ್ಬರು ನಮ್ಮ ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ದ ಬದುಕು ಕಲಿಸುವ ಕೆಲಸ ಮಾಡಿ, ಪ್ರತಿಯೊಬ್ಬರು ಹ್ರದಯವಂತಿಕೆಯ ಜೊತೆ ದೇಶವನ್ನು ಉಳಿಸುವ ನಿಟ್ಟಿನಲ್ಲಿ ಸಂಘಟಿತರಾಗಿ ಎಂದು ಅವರು ಹೇಳಿದರು.
ಇಂತಹ ಕಾರ್ಯಕ್ರಮ ಗಳ ಮೂಲಕ ದೇಶದ ಚಿಂತನೆ ಯ ಕೆಲಸಕ್ಕಾಗಿ ಈ ಸಂಘಟನೆ ಪ್ರತಿ ವರ್ಷ ವಿಶಿಷ್ಟ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದರು.

ವೇದಿಕೆಯಲ್ಲಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ದಿವಾಕರ ಶಂಭೂರು, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಬಿ. ಉದ್ಯಮಿ ಗಣೇಶ್ ಕೊಲ್ಯ, ಸಂಗಬೆಟ್ಟು ತಾ.ಪಂ.ಸದಸ್ಯ ಪ್ರಭಾಕರ ಪ್ರಭು,
ಸ್ಥಳೀಯ ಪುರಸಭಾ ಸದಸ್ಯೆ ಶೋಭಾಹರಿಶ್ಚಂದ್ರ, ಸಂಘದ ಅಧ್ಯಕ್ಷ ರಮೇಶ್ ಭಂಡಾರಿ ಮೈರಾನ್ ಪಾದೆ, ಉಪಾಧ್ಯಕ್ಷ ಜಯಂತ್ ಕಾಮಾಜೆ, ಕಾರ್ಯದರ್ಶಿ ದಿನೇಶ್ ಮೈರಾನ್ ಪಾದೆ, ಜೊತೆ ಕಾರ್ಯದರ್ಶಿ ಗಳಾದ ಸಂತೋಷ್ ಕಾಮಾಜೆ, ಬಾಲಕ್ರಷ್ಣ ಕಾಮಾಜೆ , ಕೋಶಾಧಿಕಾರಿ ಗಿರೀಶ್ ಕಾಮಾಜೆ ಹಾಗೂ ನವೋದಯ ಯುವಕ ಸಂಘದ ಸರ್ವಸದಸ್ಯರು ಹಾಜರಿದ್ದರು. ಅಕ್ಷಯ್ ಸ್ವಾಗತಿಸಿ, ಉಮೇಶ್ ವಂದಿಸಿದರು. ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಬಾಲಕೃಷ್ಣ ಕಾಮಾಜೆ ವರದಿವಾಚಿಸಿದರು.‌
ಇದೇ ಸಂದರ್ಭದಲ್ಲಿ ಪ್ರಬುದ್ದ ರಂಗಕಲಾವಿದ ಪ್ರವೀಣ್ ಕಾಮಾಜೆ ಹಾಗೂ ಕಲಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಮಾ! ಸೂರಜ್ ಕಾಮಾಜೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳಿಂದ ಹಾಗೂ ಸಂಘದ ಸದಸ್ಯ ರಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ಗಳು ನಡೆಯಿತು. ರಾತ್ರಿ ಶಾರದಾ ಕಲಾವಿದರಿಂದ ಇತ್ತ್ ನಾತ್ ದಿನ ತುಳು ಹಾಸ್ಯ ನಾಟಕ ನಡೆಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...