Friday, June 27, 2025

ಮಹತ್ವಾಕಾಂಕ್ಷೆ ಇದ್ದರೆ ಮಾತ್ರ ಬದುಕು ಸಾರ್ಥಕ ವಾಗಲು ಸಾಧ್ಯ: ಹರಿಕ್ರಷ್ಣ ಬಂಟ್ವಾಳ್

ಬಂಟ್ವಾಳ: ನವೋದಯ ಯುವಕ ಸಂಘ(ರಿ) ಮೈರಾನ್ ಪಾದೆ , ಕಾಮಾಜೆ ಇವರ 29 ನೇ ವಾರ್ಷಿಕೋತ್ಸವ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ನವೋದಯ ರಂಗಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ನವ ಉದಯವಾಗಿರುವ ನವೋದಯ ಯುವಕ ಸಂಘ ಸಾಮಾಜಿಕ , ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳ ಮೂಲಕ ಜಿಲ್ಲೆ ಗೆ ಮಾದರಿಯಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮ ಕ್ಕೆ ಆಗಮಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಅಗಮಿಸಿ ಮಾತನಾಡಿದ ಹರಿಕ್ರಷ್ಣ ಬಂಟ್ವಾಳ್ ಪ್ರತಿಯೊಬ್ಬರು ತನ್ನ ಶಕ್ತಿಯನ್ನು ಭಾರತ ದೇಶದ ಆರ್ಥಿಕ ಸಾಮಾಜಿಕ ವ್ಯವಸ್ಥೆ ಯನ್ನು ಭದ್ರಗೊಳಿಸಲು ಸಲುವಾಗಿ ವಿನಿಯೋಗಿಸುವಂತೆ ಕರೆ ನೀಡಿದರು.

ಮನುಷ್ಯನ ಲ್ಲಿ ಮಹತ್ವಾಕಾಂಕ್ಷೆ ಇದ್ದರೆ ಮಾತ್ರ ಬದುಕು ಸಾರ್ಥಕ ವಾಗಲು ಸಾಧ್ಯ, ಪ್ರತಿಯೊಬ್ಬರು ನಮ್ಮ ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ದ ಬದುಕು ಕಲಿಸುವ ಕೆಲಸ ಮಾಡಿ, ಪ್ರತಿಯೊಬ್ಬರು ಹ್ರದಯವಂತಿಕೆಯ ಜೊತೆ ದೇಶವನ್ನು ಉಳಿಸುವ ನಿಟ್ಟಿನಲ್ಲಿ ಸಂಘಟಿತರಾಗಿ ಎಂದು ಅವರು ಹೇಳಿದರು.
ಇಂತಹ ಕಾರ್ಯಕ್ರಮ ಗಳ ಮೂಲಕ ದೇಶದ ಚಿಂತನೆ ಯ ಕೆಲಸಕ್ಕಾಗಿ ಈ ಸಂಘಟನೆ ಪ್ರತಿ ವರ್ಷ ವಿಶಿಷ್ಟ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದರು.

ವೇದಿಕೆಯಲ್ಲಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ದಿವಾಕರ ಶಂಭೂರು, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಬಿ. ಉದ್ಯಮಿ ಗಣೇಶ್ ಕೊಲ್ಯ, ಸಂಗಬೆಟ್ಟು ತಾ.ಪಂ.ಸದಸ್ಯ ಪ್ರಭಾಕರ ಪ್ರಭು,
ಸ್ಥಳೀಯ ಪುರಸಭಾ ಸದಸ್ಯೆ ಶೋಭಾಹರಿಶ್ಚಂದ್ರ, ಸಂಘದ ಅಧ್ಯಕ್ಷ ರಮೇಶ್ ಭಂಡಾರಿ ಮೈರಾನ್ ಪಾದೆ, ಉಪಾಧ್ಯಕ್ಷ ಜಯಂತ್ ಕಾಮಾಜೆ, ಕಾರ್ಯದರ್ಶಿ ದಿನೇಶ್ ಮೈರಾನ್ ಪಾದೆ, ಜೊತೆ ಕಾರ್ಯದರ್ಶಿ ಗಳಾದ ಸಂತೋಷ್ ಕಾಮಾಜೆ, ಬಾಲಕ್ರಷ್ಣ ಕಾಮಾಜೆ , ಕೋಶಾಧಿಕಾರಿ ಗಿರೀಶ್ ಕಾಮಾಜೆ ಹಾಗೂ ನವೋದಯ ಯುವಕ ಸಂಘದ ಸರ್ವಸದಸ್ಯರು ಹಾಜರಿದ್ದರು. ಅಕ್ಷಯ್ ಸ್ವಾಗತಿಸಿ, ಉಮೇಶ್ ವಂದಿಸಿದರು. ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಬಾಲಕೃಷ್ಣ ಕಾಮಾಜೆ ವರದಿವಾಚಿಸಿದರು.‌
ಇದೇ ಸಂದರ್ಭದಲ್ಲಿ ಪ್ರಬುದ್ದ ರಂಗಕಲಾವಿದ ಪ್ರವೀಣ್ ಕಾಮಾಜೆ ಹಾಗೂ ಕಲಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಮಾ! ಸೂರಜ್ ಕಾಮಾಜೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳಿಂದ ಹಾಗೂ ಸಂಘದ ಸದಸ್ಯ ರಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ಗಳು ನಡೆಯಿತು. ರಾತ್ರಿ ಶಾರದಾ ಕಲಾವಿದರಿಂದ ಇತ್ತ್ ನಾತ್ ದಿನ ತುಳು ಹಾಸ್ಯ ನಾಟಕ ನಡೆಯಿತು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...