Sunday, January 25, 2026

ಮಹತ್ವಾಕಾಂಕ್ಷೆ ಇದ್ದರೆ ಮಾತ್ರ ಬದುಕು ಸಾರ್ಥಕ ವಾಗಲು ಸಾಧ್ಯ: ಹರಿಕ್ರಷ್ಣ ಬಂಟ್ವಾಳ್

ಬಂಟ್ವಾಳ: ನವೋದಯ ಯುವಕ ಸಂಘ(ರಿ) ಮೈರಾನ್ ಪಾದೆ , ಕಾಮಾಜೆ ಇವರ 29 ನೇ ವಾರ್ಷಿಕೋತ್ಸವ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ನವೋದಯ ರಂಗಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ನವ ಉದಯವಾಗಿರುವ ನವೋದಯ ಯುವಕ ಸಂಘ ಸಾಮಾಜಿಕ , ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳ ಮೂಲಕ ಜಿಲ್ಲೆ ಗೆ ಮಾದರಿಯಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮ ಕ್ಕೆ ಆಗಮಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಅಗಮಿಸಿ ಮಾತನಾಡಿದ ಹರಿಕ್ರಷ್ಣ ಬಂಟ್ವಾಳ್ ಪ್ರತಿಯೊಬ್ಬರು ತನ್ನ ಶಕ್ತಿಯನ್ನು ಭಾರತ ದೇಶದ ಆರ್ಥಿಕ ಸಾಮಾಜಿಕ ವ್ಯವಸ್ಥೆ ಯನ್ನು ಭದ್ರಗೊಳಿಸಲು ಸಲುವಾಗಿ ವಿನಿಯೋಗಿಸುವಂತೆ ಕರೆ ನೀಡಿದರು.

ಮನುಷ್ಯನ ಲ್ಲಿ ಮಹತ್ವಾಕಾಂಕ್ಷೆ ಇದ್ದರೆ ಮಾತ್ರ ಬದುಕು ಸಾರ್ಥಕ ವಾಗಲು ಸಾಧ್ಯ, ಪ್ರತಿಯೊಬ್ಬರು ನಮ್ಮ ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ದ ಬದುಕು ಕಲಿಸುವ ಕೆಲಸ ಮಾಡಿ, ಪ್ರತಿಯೊಬ್ಬರು ಹ್ರದಯವಂತಿಕೆಯ ಜೊತೆ ದೇಶವನ್ನು ಉಳಿಸುವ ನಿಟ್ಟಿನಲ್ಲಿ ಸಂಘಟಿತರಾಗಿ ಎಂದು ಅವರು ಹೇಳಿದರು.
ಇಂತಹ ಕಾರ್ಯಕ್ರಮ ಗಳ ಮೂಲಕ ದೇಶದ ಚಿಂತನೆ ಯ ಕೆಲಸಕ್ಕಾಗಿ ಈ ಸಂಘಟನೆ ಪ್ರತಿ ವರ್ಷ ವಿಶಿಷ್ಟ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದರು.

ವೇದಿಕೆಯಲ್ಲಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ದಿವಾಕರ ಶಂಭೂರು, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಬಿ. ಉದ್ಯಮಿ ಗಣೇಶ್ ಕೊಲ್ಯ, ಸಂಗಬೆಟ್ಟು ತಾ.ಪಂ.ಸದಸ್ಯ ಪ್ರಭಾಕರ ಪ್ರಭು,
ಸ್ಥಳೀಯ ಪುರಸಭಾ ಸದಸ್ಯೆ ಶೋಭಾಹರಿಶ್ಚಂದ್ರ, ಸಂಘದ ಅಧ್ಯಕ್ಷ ರಮೇಶ್ ಭಂಡಾರಿ ಮೈರಾನ್ ಪಾದೆ, ಉಪಾಧ್ಯಕ್ಷ ಜಯಂತ್ ಕಾಮಾಜೆ, ಕಾರ್ಯದರ್ಶಿ ದಿನೇಶ್ ಮೈರಾನ್ ಪಾದೆ, ಜೊತೆ ಕಾರ್ಯದರ್ಶಿ ಗಳಾದ ಸಂತೋಷ್ ಕಾಮಾಜೆ, ಬಾಲಕ್ರಷ್ಣ ಕಾಮಾಜೆ , ಕೋಶಾಧಿಕಾರಿ ಗಿರೀಶ್ ಕಾಮಾಜೆ ಹಾಗೂ ನವೋದಯ ಯುವಕ ಸಂಘದ ಸರ್ವಸದಸ್ಯರು ಹಾಜರಿದ್ದರು. ಅಕ್ಷಯ್ ಸ್ವಾಗತಿಸಿ, ಉಮೇಶ್ ವಂದಿಸಿದರು. ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಬಾಲಕೃಷ್ಣ ಕಾಮಾಜೆ ವರದಿವಾಚಿಸಿದರು.‌
ಇದೇ ಸಂದರ್ಭದಲ್ಲಿ ಪ್ರಬುದ್ದ ರಂಗಕಲಾವಿದ ಪ್ರವೀಣ್ ಕಾಮಾಜೆ ಹಾಗೂ ಕಲಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಮಾ! ಸೂರಜ್ ಕಾಮಾಜೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳಿಂದ ಹಾಗೂ ಸಂಘದ ಸದಸ್ಯ ರಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ಗಳು ನಡೆಯಿತು. ರಾತ್ರಿ ಶಾರದಾ ಕಲಾವಿದರಿಂದ ಇತ್ತ್ ನಾತ್ ದಿನ ತುಳು ಹಾಸ್ಯ ನಾಟಕ ನಡೆಯಿತು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...